ಮೈಸೂರು: ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸದಿಂದ ಹೇಳಿದ್ದಾರೆ.
ನಗರದ ವಾರ್ಡ್ ನಂಬರ್ 23ರ ವ್ಯಾಪ್ತಿಯ ಕೊಲ್ಲಾಪುರದಮ್ಮ ದೇವಸ್ಥಾನದ ಹಿಂಭಾಗ ಅಂದಾಜು 3.5 ಲಕ್ಷ ವೆಚ್ಚದ ಕೊಳವೆಬಾವಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಅವರು ಮಾತನಾಡಿದರು.
ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಘಟನಾ ಚತುರತೆಯಿಂದ ನಮಗೆ ಗೆಲುವು ಖಚಿತವಾಗಲಿದೆ. ಜೊತೆಗೆ ಜನತೆ ಕಾಂಗ್ರೆಸ್ ಪಕ್ಷದ ಪರ ಇದ್ದಾರೆ ಎಂದು ಹೇಳಿದರು.
ವಾರ್ಡ್ 23 ರ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದೆ ಹಾಗಾಗಿ ಬೋರ್ ವೆಲ್ ಕನೆಕ್ಷನ್ ಕೊಡುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಈ ವೇಳೆ ಹರೀಶ್ ಗೌಡ ಭರವಸೆ ನೀಡಿದರು.
ಟ್ಯಾಂಕ್ ನಿರ್ಮಾಣದ ಕೆಲಸ ಶೇ.70 ರಷ್ಟು ಮುಗಿದಿದೆ. ರಮಾವಿಲಾಸ್ ರಸ್ತೆ, ಬಂಡಿಕೇರಿ, ಮರಿಮಲ್ಲಪ್ಪ ಶಾಲೆ ಹಿಂಬಾಗ ಮತ್ತು ಮುಂಭಾಗ ಹೀಗೆ ಈ ಭಾಗದ ಎಲ್ಲಾ ಕಡೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ, ಇನ್ನು ಒಂದು ತಿಂಗಳೊಳಗೆ ಕಾಮಗಾರಿ ಮುಗಿದು ಕುಡಿಯುವ ನೀರು ಸರಬರಾಜು ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ನಗರ ಪಾಲಿಕೆ ಮಾಜಿ ಸದಸ್ಯ ನಾಗಭೂಷಣ, ಕಾಂಗ್ರೆಸ್ ಮುಖಂಡರುಗಳಾದ ರಾಜೀವ, ಮಹದೇವ, ಆನಂದ, ರವಿಚಂದ್ರ, ಮಂಜುನಾಥ, ಶಾಂತ ,ಮಂಗಳ, ಸಂಜಯ, ಲೋಕೇಶ, ಮುಸ್ತಾಫ , ಯುಜಿಡಿ ವಾಟರ್ ಸಪ್ಲೈ ಅಧಿಕಾರಿ ಜಗದೀಶ್ ಆರ್, ವಾಟರ್ ಇನ್ಸ್ಪೆಕ್ಟರ್ ಮಹದೇವ್ ಹಾಗೂ ಅನೇಕ ಮುಖಂಡರು ಹಾಜರಿದ್ದರು.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…