ಮೈಸೂರು

ಸಮಯ ಪ್ರಜ್ಞೆಯಿಂದ ಜಯ ಸಾಧ್ಯ: ಎಂ.ಸಹಾನ

ಮೈಸೂರು: ಕ್ರೀಡಾ ಪಟುಗಳು ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸಬಹುದು ಎಂದು   ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಿಕ್‌ ಬಾಕ್ಸಿಂಗ್‌ ಕ್ರೀಡಪಟು ಎಂ.ಸಹನಾ ಹೇಳಿದರು.

ಜ್ಯೋತಿನಗರದ ಡಿ.ಎ.ಆರ್.‌ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ ಪೊಲೀಸ್‌ ವಾರ್ಷಿಕ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳು ತಮಗೆ ತಾವೇ ಪ್ರೇರಣೆ ಪಡೆದುಕೊಂಡು ನಿರಂತರ ಪ್ರಯತ್ನ ಮಾಡಿದರೆ ಕ್ರೀಡೆಯಲ್ಲಿ ಯಶಸ್ಸು ಕಟಿಟ್ಟ ಬುತ್ತಿ ಎಂದು ತಮ್ಮ ಸಾಧನೆಯ ಹಾದಿಯನ್ನು ತಿಳಿಸಿದರು.

ನಮ್ಮ ತಂದೆಯಾದ ನಿವೃತ್ತ ಎ.ಎಸ್.ಐ ಮಹದೇವಯ್ಯ ಅವರು ಕೆಲಸ ನಿರ್ವಹಿಸಿದ ಸ್ಥಳದಲ್ಲಿ ನಾನು ಮುಖ್ಯ ಅತಿಥಿಯಾಗಿ ಬಂದಿರುವುದು ತುಂಬ ಸಂತೋಷವಾಗುತ್ತಿದೆ ಎಂದ ಸಹಾನ ಅವರು, ತಮ್ಮ ತಾಯಿ, ಸಹೋದರ ಹಾಗೂ  ಕ್ರೀಡಾ ಗುರುಗಳಿಗೆ ಧನ್ಯವಾದ ಹೇಳಿದರು.

ಪೊಲೀಸ್‌ ವಾರ್ಷಿಕ ಕ್ರೀಡಾ ಕಾರ್ಯಕರ್ಮದಲ್ಲಿ ಪುರುಷರ ನಾನೂರು ಮೀಟರ್‌ ಹಾಗೂ ಮಹಿಳೆಯರ ನೂರು ಮೀಟರ್‌ ಓಟದ ಸ್ಪರ್ಧೆಗೆ ಚಾಲನೆ ನೀಡಿದರು. ಓಟದ ಸ್ಪರ್ಧೆಯಲ್ಲಿ ವಿಜೇತರಾದ ಪುರುಷ ಹಾಗೂ ಮಹಿಳಾ ಪೊಲೀಸರಿಗೆ ಪ್ರಥಮ ದ್ವಿತೀಯ ಹಾಗೂ ತೃತ್ತೀಯವಾಗಿ ಪದಕಗಳನ್ನು ನೀಡಿ  ಗೌರವಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ.ಎನ್ ವಿಷ್ಣುವರ್ಧನ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

3 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

3 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

3 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

4 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

4 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

5 hours ago