ಮೈಸೂರು: ಕ್ರೀಡಾ ಪಟುಗಳು ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸಬಹುದು ಎಂದು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಪಟು ಎಂ.ಸಹನಾ ಹೇಳಿದರು.
ಜ್ಯೋತಿನಗರದ ಡಿ.ಎ.ಆರ್. ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಪಟುಗಳು ತಮಗೆ ತಾವೇ ಪ್ರೇರಣೆ ಪಡೆದುಕೊಂಡು ನಿರಂತರ ಪ್ರಯತ್ನ ಮಾಡಿದರೆ ಕ್ರೀಡೆಯಲ್ಲಿ ಯಶಸ್ಸು ಕಟಿಟ್ಟ ಬುತ್ತಿ ಎಂದು ತಮ್ಮ ಸಾಧನೆಯ ಹಾದಿಯನ್ನು ತಿಳಿಸಿದರು.
ನಮ್ಮ ತಂದೆಯಾದ ನಿವೃತ್ತ ಎ.ಎಸ್.ಐ ಮಹದೇವಯ್ಯ ಅವರು ಕೆಲಸ ನಿರ್ವಹಿಸಿದ ಸ್ಥಳದಲ್ಲಿ ನಾನು ಮುಖ್ಯ ಅತಿಥಿಯಾಗಿ ಬಂದಿರುವುದು ತುಂಬ ಸಂತೋಷವಾಗುತ್ತಿದೆ ಎಂದ ಸಹಾನ ಅವರು, ತಮ್ಮ ತಾಯಿ, ಸಹೋದರ ಹಾಗೂ ಕ್ರೀಡಾ ಗುರುಗಳಿಗೆ ಧನ್ಯವಾದ ಹೇಳಿದರು.
ಪೊಲೀಸ್ ವಾರ್ಷಿಕ ಕ್ರೀಡಾ ಕಾರ್ಯಕರ್ಮದಲ್ಲಿ ಪುರುಷರ ನಾನೂರು ಮೀಟರ್ ಹಾಗೂ ಮಹಿಳೆಯರ ನೂರು ಮೀಟರ್ ಓಟದ ಸ್ಪರ್ಧೆಗೆ ಚಾಲನೆ ನೀಡಿದರು. ಓಟದ ಸ್ಪರ್ಧೆಯಲ್ಲಿ ವಿಜೇತರಾದ ಪುರುಷ ಹಾಗೂ ಮಹಿಳಾ ಪೊಲೀಸರಿಗೆ ಪ್ರಥಮ ದ್ವಿತೀಯ ಹಾಗೂ ತೃತ್ತೀಯವಾಗಿ ಪದಕಗಳನ್ನು ನೀಡಿ ಗೌರವಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.ಎನ್ ವಿಷ್ಣುವರ್ಧನ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…