ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.
ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್ ಶಂಕರ್ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ ಸಿಎಂ ಆಗಬೇಕಿತ್ತು. ಅಂದು ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಗಾದಿಗಕ್ಕೆ ತಮ್ಮ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಅವಕಾಶ ವಂಚಿತನಾದೆ ಈಗ 14 ವರ್ಷಗಳ ಬಳಿಕ ವನವಾಸದ ನಂತರ ಪಕ್ಷದಿಂದ ನನಗೆ ದೊಡ್ಡ ಹದ್ದೆ ಸಿಕ್ಕಿದೆ ಎಂದರು.
2019 ರಲ್ಲಿ ಕಾಂಗ್ರೆಸ್ ಸೇರಿದ್ದ ವಿಜಯ್ಶಂಕರ್ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡಿದ್ದರು. ಬಳಿಕ ಅಲ್ಲಿಂದ ಬಿಜೆಪಿಗೆ ಮತ್ತೆ ಸೇರಿದ್ದರು. ಇನ್ನು ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬಿಟ್ಟು ಹೋಗಿ ರಾಜಕೀಯವಾಗಿ ನಾನು ತಪ್ಪು ಮಾಡಿದ್ದೆ. ಇವೆಲ್ಲವೂ ರಾಜಕೀಯದಲ್ಲಿ ಸಹಜವೂ ಕೂಡಾ ಆಗಿದೆ ಎಂದು ತಿಳಿಸಿದರು.




