ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದರು.
ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿ ವಿವಿಧ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ನೂರಾರು ಜನ, ಮಹಿಳೆಯರು, ವಿದ್ಯಾರ್ಥಿಗಳು ಶಾಲಾ-ಕಾಲೇಜು, ವ್ಯವಹಾರಕ್ಕೆ ಗ್ರಾಮಕ್ಕೆ ಆಗಮಿಸುತ್ತಾರೆ. ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದರಿಂದ ನಾನಾ ರೀತಿ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಮದ್ಯದ ಅಂಗಡಿಗೆ ಅನುಮತಿ ನೀಡಬಾರದು ಎಂದು ಪಿಡಿಓಗೆ ಮನವಿ ಸಲ್ಲಿಸಿದರು.
ಬಾರ್ ತೆರೆಯಲು ಎನ್ಒಸಿಗಾಗಿ ಅರ್ಜಿ ಹಾಕಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಗ್ರಾಮದ ಹಿತ ಕಾಯಬೇಕೆಂದು ವಿನಂತಿ. ಮಾಡಿರುವ ಗ್ರಾಮಸ್ಥರು, ಬಾರ್ ಅಥವಾ ಯಾವುದೇ ರೀತಿಯ ಮದ್ಯದಂಗಡಿ ಪ್ರಾರಂಭಿಸಿದರೆ ರೈತ ಸಂಘ, ಸ್ತ್ರೀ ಶಕ್ತಿ ಸೇರಿ ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…
ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಸರಿಯಾದ ಸಮಯಕೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…