ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದರು.
ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿ ವಿವಿಧ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ನೂರಾರು ಜನ, ಮಹಿಳೆಯರು, ವಿದ್ಯಾರ್ಥಿಗಳು ಶಾಲಾ-ಕಾಲೇಜು, ವ್ಯವಹಾರಕ್ಕೆ ಗ್ರಾಮಕ್ಕೆ ಆಗಮಿಸುತ್ತಾರೆ. ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದರಿಂದ ನಾನಾ ರೀತಿ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಮದ್ಯದ ಅಂಗಡಿಗೆ ಅನುಮತಿ ನೀಡಬಾರದು ಎಂದು ಪಿಡಿಓಗೆ ಮನವಿ ಸಲ್ಲಿಸಿದರು.
ಬಾರ್ ತೆರೆಯಲು ಎನ್ಒಸಿಗಾಗಿ ಅರ್ಜಿ ಹಾಕಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಗ್ರಾಮದ ಹಿತ ಕಾಯಬೇಕೆಂದು ವಿನಂತಿ. ಮಾಡಿರುವ ಗ್ರಾಮಸ್ಥರು, ಬಾರ್ ಅಥವಾ ಯಾವುದೇ ರೀತಿಯ ಮದ್ಯದಂಗಡಿ ಪ್ರಾರಂಭಿಸಿದರೆ ರೈತ ಸಂಘ, ಸ್ತ್ರೀ ಶಕ್ತಿ ಸೇರಿ ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…