ಮೈಸೂರು

ಸಮಸ್ಯೆಗಳ ಆಗರವಾದ ಗ್ರಾಮಗಳು; ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಚಿವ ವೆಂಕಟೇಶ್

ವಿವಿಧ ಗ್ರಾಮಗಳಲ್ಲಿ ಗುದ್ದಲಿ ಪೂಜೆ,

ಪಿರಿಯಾಪಟ್ಟಣ: ಸಕಾಲಕ್ಕೆ ಸರಿಯಾಗಿ ನೀರೀಕ್ಷೆಗೂ ಮೀರಿ ಮಳೆಯಾಗಿ ಕೆರೆಕಟ್ಟೆಗಳು ಮೈದುಂಬಿ ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ ಎಂದು ರೇಷ್ಮೆ ಹಾಗೂ ಪಶುಪಾಲನ ಸಚಿವ ವೆಂಕಟೇಶ್ ಹೇಳಿದರು.

ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಹಾಗೂ ಕೆರೆಗಳ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ಹಲವು ಹಳ್ಳಿಗಳಲ್ಲಿ ಮೂಲ ಸೌಕರ್ಯಗಳ ಕೊರೆತೆಯಿದ್ದು ಹಂತ ಹಂತವಾಗಿ ಸಮರ್ಪಕವಾಗಿ ಅಭಿವೃದ್ಧಿ ಪಡಿಸಲು ಪ್ರಯತ್ನಿಸುತ್ತೇನೆ ಎಂದರು.

ಮರಡಿಯೂರು ಗ್ರಾಮದ ರಸ್ತೆ ಅಭಿವೃದ್ಧಿಗೆ ₹.೧.೩೫ಲಕ್ಷ, ಮುತ್ತಿನ ಮುಳ್ಳುಸೋಗೆ ಗ್ರಾಮದ ಚರಂಡಿ ದುರಸ್ತಿಕರಣಕ್ಕೆ ₹.೨೫ಲಕ್ಷ ,ಶ್ಯಾನಭೋಗನಹಳ್ಳಿ ಗ್ರಾಮದ ಹಾಲಿನ ಡೇರಿ ಆವರಣದಲ್ಲಿ ತಡೆಗೋಡೆ ನಿರ್ಮಾಣಕ್ಕೆ ₹.೬೦ಲಕ್ಷ, ದೊಡ್ಡನೇರಳೆ ಕೆರೆ ಅಭಿವೃದ್ಧಿಗೆ ೫೦ಲಕ್ಷ, ಲಕ್ಷ್ಮಿಪುರ ಗ್ರಾಮದ ಡಾಂಬರ್ ರಸ್ತೆ ಅಭಿವೃದ್ಧಿಗೆ ₹.೧.೫ಲಕ್ಷ, ಚಪ್ಪರದಹಳ್ಳಿ ಸಿ.ಸಿ ರಸ್ತೆ ನಿರ್ಮಾಣಕ್ಕೆ₹. ೧.೭೫ ಲಕ್ಷ ವೆಚ್ಚ ಮಾಡಿ ಗ್ರಾಮಗಳ ಅಭಿವೃದ್ಧಿ ಪಡಿಸಲು ಪ್ರಯತ್ನಿಸಿದ್ದೇನೆ. ತಾವುಗಳು ಸಹ ಅಡೆತಡೆಗಳಿಗೆ ಸಹಕರಿಸಬೇಕು, ಈ ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಟೆಂಡರ್ ಕರೆದಿದ್ದು ಅಧಿಕಾರಿಗಳು ಸೂಚನೆ ಮೇರೆಗೆ ಶೀಘ್ರದಲ್ಲೆ ಕಾಮಗಾರಿ ಚಾಲನೆಗೊಳ್ಳಲಿದೆ ಎಂದರು.

ಸಚಿವರಿಗೆ ಗ್ರಾಮಸ್ಥರ ಬೇಡಿಕೆ
ಮರಡಿಯೂರು ಗ್ರಾಮಕ್ಕೆ ಸಮುದಾಯ ಭವನ ನಿರ್ಮಾಣ , ಗ್ರಾಮದ ಕ್ರಿಶ್ಚಿಯನ್ ಚರ್ಚ್ ಮುಂಭಾಗದ ಅವರಣಕ್ಕೆ ಗಂಟೆ ಗೋಪುರ ನಿರ್ಮಾಣಕ್ಕೆ ಫಾದರ್ ಜೋಸೆಫ್ ಮೆರಿ ಒತ್ತಾಯ,ಹಾಗೂ ಮುತ್ತಿನ ಮುಳ್ಳುಸೋಗೆ ಗ್ರಾಮದ ಸರ್ಕಾರಿ ಜಾಗದಲ್ಲಿ ಚೌಡೇಶ್ವರಿ ಸಮುದಾಯ ಭವನ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ ಮಾಡಿದರು.

ಸಚಿವರಿಂದ ಅಧಿಕಾರಿಗೆ ತರಾಟೆ
ಮರಡಿಯೂರು ಗ್ರಾಮದ ಜನರ ಭೂಮಿ ಒಂದೇ ಸರ್ವೇ ನಂಬರ್ನಲ್ಲಿದ್ದು, ಕಳೆದ ಹತ್ತು ವರ್ಷಗಳಿಂದ ಹಾರ್ನಹಳ್ಳಿ ಹೋಬಳಿಗೆ ಗ್ರಾಮ ಲೆಕ್ಕಧಿಕಾರಿಯಾಗಿರುವಾಗಲೇ ಇವರ ಗಮನಕ್ಕೆ ತಂದಿದ್ದೆವು, ಈಗ ಆನಂದ್ ರವರು ಕಂದಾಯ ನೀರೀಕ್ಷಕರಾಗಿದ್ದರು ಸಹ ಪಕ್ಕ ಪೋಡ್ ಬಗ್ಗೆಯಲ್ಲಿ ಖಾತೆ ಮಾಡದೇ ಫೈಲ್ ಕಳೆದು ಹೋಗಿದೆ ಎಂದು ಜವಾಬ್ ನೀಡುತ್ತಿರುವುದು ಯಾವ ನ್ಯಾಯ ಎಂದು ಗ್ರಾಮದ ಜನರು ಕಂದಾಯ ನಿರೀಕ್ಷಕ ಆನಂದ್ ಮೇಲೆ ಆರೋಪ ಮಾಡಿದರು.

ಈ ವೇಳೆ ಗರಂ ಆದ ಸಚಿವರು ಇನ್ನೆರಡು ವಾರದೊಳಗೆ ಗೆ ಈ ಕೆಲಸ ಮುಗಿಸಿ ಜನರ ಕಷ್ಟಗಳಿಗೆ ಸ್ಪಂದಿಸಿ ಇಲ್ಲಾ ಕ್ರಮ ಕೈಗೊಳ್ಳಿ ಎಂದು ಎಚ್ಚರ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ನಿಸರ್ಗಪ್ರಿಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೆಹಮಾತ್ ಜಾನ್ ಬಾಬು, ಡಿ.ಟಿ ಸ್ವಾಮಿ, ಇ,ಓ,ಸುನೀಲ್ ಕುಮಾರ್, ತಾಲೂಕು ಕಾರ್ಯಪಾಲಕ ಅಭಿಯಂತರರಾದ ವೆಂಕಟೇಶ್ ಎಂ.ಆರ್,  ಪಶುಪಾಲನ ಸಹಾಯಕ ನಿರ್ದೇಶಕ ಸೋಮಯ್ಯ, ಸಣ್ಣ ನೀರಾವರಿ ಎಇಇ ಕೃಷ್ಣಮೂರ್ತಿ, ಕೃಷಿ ಅಧಿಕಾರಿ ಪ್ರಸಾದ್, ಆಹಾರ ಇಲಾಖೆ ಸಣ್ಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಚಂದ್ರಶೇಖರ್, ಹಿಂದುಳಿದ ಕಲ್ಯಾಣ ಕಲ್ಯಾಣಧಿಕಾರಿ ಕೃಷ್ಣೇಗೌಡ ಹೊಸಳ್ಳಿ,  ಕಾವೇರಿ ನೀರಾವರಿ ನಿಗಮದ ಅಭಿಯಂತರರಾದ ಎಇಇ ಗೋಕುಲ್, ಡೈರಿ ಅಧ್ಯಕ್ಷ ಬಸವರಾಜ್‌ ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

53 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

1 hour ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

6 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago