ಮೈಸೂರು

ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಹಾಗೂ ಪರಿಶೀಲನೆ

ಮೈಸೂರು: ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ರವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯವರೊಂದಿಗೆ ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ಕಂಡು ಕಳವಳ ವ್ಯಕ್ತಪಡಿಸಿದರು.

ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿ.ಜಿ. ಅವರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರು ನಗರದಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳು ಸಮುದಾಯ ಭವನ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಂಗನವಾಡಿ ಕೇಂದ್ರದಲ್ಲಿ ಶುದ್ಧ ಗಾಳಿ, ಬೆಳಕು, ಕುಡಿಯುವ ನೀರಿನ ಕೊರತೆ ಇರುತ್ತದೆ. ಅಲ್ಲದೆ ಕಟ್ಟಡಗಳು ಶಿಥಿಲ ಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುತ್ತದೆ. ಇನ್ನು ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಹೆಗ್ಗಣಗಳು ಬಿಲಾ ತೋಡಿ ಕಟ್ಟಡದ ನೆಲಹಾಸು ಹಾಳಾಗಿರುವುದು, ಇದರಿಂದ ಅಹಾರ ಸಂರಕ್ಷಣೆಗೆ ತೊಡಕುಂಟಾಗಿರುವುದು ಕಂಡು ಬಂದಿರುತ್ತದೆ. ಹಾಗೂ ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಮುಂದುವರೆದು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ತಯಾರಿಸುವ ಆಹಾರದಲ್ಲಿ ಪೋಶಕಾಂಶದ ಕೊರತೆ, ಮಕ್ಕಳಿಗೆ ತಯಾರಿಸುವ ಲಡ್ಡು ಹಾಗೂ ಸಾಂಬಾರು ಮಾಡಲು ಉಪಯೋಗಿಸುವ ಬೇಳೆ, ಕಾಳುಗಳು ಅವಧಿ ಮುಕ್ತಾಯವಾಗಿದ್ದ (date Expired) ಆಹಾರ ಪದಾರ್ಥಗಳನ್ನು ಇರುವುದನ್ನು ಕಂಡು ನ್ಯಾಯಾಧೀಶರು ಕಳವಳವನ್ನು ವ್ಯಕ್ತಪಡಿಸಿದ್ದರು. ಸದರಿ ಆಹಾರ ಪದಾರ್ಥಗಳನ್ನು ತಕ್ಷಣ ವಾಪಸ್ಸು ಕಳುಹಿಸುವಂತೆ ಹಾಗೂ ಉತ್ತಮ ಅಹಾರ ಪದಾರ್ಥಗಳು ಪಡೆಯುವಂತೆ ನಿರ್ದೇಶಿಸಿದರು.

ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಮೇಲ್ವಿಚಾರಕರಿಗೆ ಅಂಗನವಾಡಿ ಕೇಂದ್ರಗಳನ್ನು ಹೇಗೆ ನಿಭಾಹಿಸಬೇಕು ಮತ್ತು ಸರ್ಕಾರದ ಆಶಾಯ, ಉದ್ದೇಶಗಳನ್ನು ಮನವರಿಕೆ ಮಾಡಿಕೊಟ್ಟು, ಮೂಲ ಸೌಕರ್ಯಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.

ಹಾಗೆಯೇ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರ, ಶೂಶ್ರೂಷಕರ, ಪೊಲೀಸ್ ಠಾಣೆಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಅಧಿಕಾರಿಗಳ, ಮೇಲ್ವಿಚಾರಕರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂರವಾಣಿ ಸಂಖ್ಯೆಗಳನ್ನು ಪ್ರಕಟಿಸುವಂತೆ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

10 mins ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

26 mins ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

32 mins ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

53 mins ago

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

1 hour ago

ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…

2 hours ago