ಮೈಸೂರು

ಒಕ್ಕಲಿಗರು ಉದ್ಯಮಶೀಲತೆ ರೂಢಿಸಿಕೊಳ್ಳಬೇಕು: ನಿಶ್ಚಲಾನಂದನಾಥ

ಪಿರಿಯಾಪಟ್ಟಣ : ಅವಕಾಶಗಳನ್ನು ಸೃಷ್ಟಿಸಿಕೊಂಡು ಸಮಾಜಕ್ಕೆ, ನಾಡಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಲು ಒಕ್ಕಲಿಗ ಸಮುದಾಯ ಹೆಚ್ಚು ಗಮನಹರಿಸಬೇಕೆಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದರು.

ಪಟ್ಟಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಸಂಸ್ಮರಣೋತ್ಸವ ಮತ್ತು ಪ್ರಗತಿಪರ ರೈತರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಕ್ಕಲಿಗ ಸಮುದಾಯ ಕುಲಕಸುಬಿಗೆ ಆದ್ಯತೆ ನೀಡದೆ ಸಮಾಜದಲ್ಲಿ ಇರುವ ಅವಕಾಶಗಳನ್ನು ಸೃಷ್ಟಿಸಿಕೊಂಡು ಪ್ರಗತಿಯತ್ತ ಮುನ್ನುಗಬೇಕು. ಕೃಷಿಯನ್ನೇ ಹೆಚ್ಚು ಅವಲಂಬಿಸಿಕೊಳ್ಳುವುದರ ಬದಲು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಪ್ರಪಂಚದ ಇನ್ನಿತರ ಕ್ಷೇತ್ರಗಳತ್ತ ತಮ್ಮ ಗಮನವನ್ನು ಹರಿಸಿ ಹೊಸ ಹೊಸ ಅಧ್ಯಯನಗಳಿಗೆ ಹೂಡಿಕೆಗಳಿಗೆ ಆದ್ಯತೆ ನೀಡಬೇಕು ಎಂದರು.

ಇಂದು ನಮ್ಮ ಸಮುದಾಯದಲ್ಲಿ ಮಹಿಳೆಯರು ಕೂಡ ಜ್ಞಾನವಂತರಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು.

ನಿವೃತ್ತ ಪ್ರಾಂಶುಪಾಲ ನಂಜುಂಡಯ್ಯ ಮಾತನಾಡಿ, ಕೆಂಪೇಗೌಡರವರ ದೂರದೃಷ್ಟಿಯ ಫಲವಾಗಿ ಇಂದು ಬೆಂಗಳೂರು ವಿಶ್ವವಿಖ್ಯಾತವಾಗಿದೆ. ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಿ ಜಯಂತಿ ಆಚರಣೆ ಮಾಡುತ್ತಿರುವುದು ಸರಿಯಲ್ಲ. ಅವರು ಸರ್ವರ ಅನುಕೂಲಕ್ಕಾಗಿ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇವರ ಅವಧಿಯಲ್ಲಿ ಕೃಷಿ ಕ್ಷೇತ್ರ, ವ್ಯಾಪಾರ, ಶಿಕ್ಷಣ, ಸಮುದಾಯದ ಏಳಿಗೆ ಸಾಹಿತ್ಯ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಿದ್ದ ಫಲವಾಗಿ ಬೆಂಗಳೂರು ಪ್ರಸಿದ್ಧಿಯಾಗಲು ಕಾರಣವಾಗಿದೆ ಎಂದರು.

ಸ್ಮಾರ್ಟ್ ಕ್ವಿಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ದೀಪು ಗೌಡ ಮಾತನಾಡಿದರು. ಈ ವೇಳೆ ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ಪಡೆದ ಶ್ರೇಯಸ್ ಹಾಗೂ ತಾಲ್ಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವರದಿಗಾರ ಶರತ್ ಕುಮಾರ್, ಕೋಮಲಾಪುರದ ನಿಂಗೇಗೌಡ, ಹೆಚ್.ಎಸ್.ಮಂಜುನಾಥ, ಮಣಿಕಂಠ, ಹೊಸೂರ್ ಕುಮಾರ್, ಗೋವಿಂದ, ನಾಗೇಶ್, ಪ್ರಕಾಶ್ , ಆದಿಲ್, ಪ್ರಭಾಕರ್, ವೀಣಾ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕುಂಚಿಟಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಹನುಮಂತನಾಥ ಸ್ವಾಮೀಜಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ವಿ.ಸುರೇಶ್, ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥೆ ಡಾ.ನವಿತಾ ತಿಮ್ಮಯ್ಯ, ಐಕಾನಿಕ್ ಹಾಸ್ಪಿಟಲ್ ವ್ಯವಸ್ಥಾಪಕ ನಿರ್ದೇಶಕ ಭರತ್ ದೇವರಾಜಪ್ಪ , ತಾಲ್ಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ, ಕಾರ್ಯಕ್ರಮದ ಸಂಚಾಲಕರಾದ ನಾಗಣ್ಣ ಗೌಡ, ಬಿ.ಎಸ್.ಕುಮಾರ್, ಒಕ್ಕಲಿಗ ಯುವ ಬ್ರಿಗೇಡ್ ಸದಸ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

59 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago