ಮೈಸೂರು

ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ: ಯದುವೀರ್ ಒಡೆಯರ್

ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಮನವಿ ಮಾಡಿದರು.

ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷದಲ್ಲಿ ಮೈಸೂರು ಕೊಡಗು ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ , ಜಲಜೀವನ್ ಮಿಷನ್ ಮೂಲಕ ಎರಡುವರೆ ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಕೆ , ಪ್ರಾದಾನ ಮಂತ್ರಿ ಅವಾಜ್ ಯೋಜನೆಯ ಮೂಲಕ ಆಶ್ರಯ ಮನೆಗಳು, 41 ಜನ ಔಷದಿ ಕೆಂದ್ರದ ಮೂಲಕ ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಔಷದಿ ಪೂರೈಕೆ ,ವಂದೇಭಾರತ್ ರೈಲುಗಳ ದೇಶದ ವಿವಿದೆಡೆಗೆ ಸಂಪರ್ಕ, ಹೀಗೆ ಹಲವಾರು ಯೋಜನೆಗಳನ್ನು ಮೈಸೂರು ಕೊಡಗು ಕ್ಷೇತ್ರಕ್ಕೆ ಕೊಟ್ಟಿದ್ದಾರೆ.

ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದರೊಂದಿಗೆ ಬರುವ ಚುನಾವಣೆಯಲ್ಲಿ ಮತ್ತೆ ನಾವು ಮೋದಿಯವರ ಕೈ ಬಲಪಡಿಸಬೇಕಿದೆ ಶ್ರೇಷ್ಠ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು

ನಮ್ಮ ಪೂರ್ವಜರಂತೆ ಜನರ ನಡುಗೆ ಇದ್ದು ಕೆಲಸ ಮಾಡುತ್ತೇನೆ : ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ಸಿಗರು ಮೈತ್ರಿ ಅಭ್ಯರ್ಥಿ ಯದುವೀರ್ ರವರ ವಿರುದ್ದ ಮಹರಾಜರಾಗಿ ಅರಮನೆಯೊಗಳೆ ಇರುವವರು ಜನರ ಮಧ್ಯೆ ಬಂದು ಸಮಸ್ಯೆ ಬಗೆಹರಿಸುತ್ತಾರಾ ಜನಸಾಮಾನ್ಯರು ಅವರನ್ನು ಭೇಟಿ ಮಾಡಲು ಆಗುತ್ತಾ ಎಂಬ ಅಪಪ್ರಚಾರ ನೆಡೆಸುತ್ತಿದ್ದು ಈಎಲ್ಲಾ ಅಪಪ್ರಚಾರಗಳಿಗೂ ಯದುವೀರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಪೂರ್ವಜರು ಅರಮನೆಯಲ್ಲಿ ಹುಟ್ಟಿದ್ದರೂ ಜನ ಸಾಮನ್ಯರ ನಡುವೆ ಇದ್ದು ನೆರವಾಗುತ್ತಿದ್ದರು ನಾವು ಅವರಂತೆ ನಿಮ್ಮ ನಡುವೆ ಇದ್ದು ನಿಮ್ಮ ಸೇವೆ ಮಾಡುತ್ತೇನೆ ನಿಮ್ಮಗಳ ಸೇವೆ ಮಾಡುವುದು ನನ್ನ ಪಾಲಿನ ಸೌಭಾಗ್ಯವೆಂದು ಭಾವಿಸಿದ್ದೇನೆ ಯಾವುದೆ ಅಪಪ್ರಚಾರಗಳಿಗೆ ಕಿವಿಕೊಡದೆ ನನ್ನನ್ನು ಬೆಂಬಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು.

ಈ ವೇಳೆ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ ದೇವೆಗೌಡ, ಬಿಜೆಪಿ ಯುವ ಮುಖಂಡ ಕವೀಶ್ ಗೌಡ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

11 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

11 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

11 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

12 hours ago