ಮೈಸೂರು

ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ: ಯದುವೀರ್ ಒಡೆಯರ್

ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಮನವಿ ಮಾಡಿದರು.

ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷದಲ್ಲಿ ಮೈಸೂರು ಕೊಡಗು ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ , ಜಲಜೀವನ್ ಮಿಷನ್ ಮೂಲಕ ಎರಡುವರೆ ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಕೆ , ಪ್ರಾದಾನ ಮಂತ್ರಿ ಅವಾಜ್ ಯೋಜನೆಯ ಮೂಲಕ ಆಶ್ರಯ ಮನೆಗಳು, 41 ಜನ ಔಷದಿ ಕೆಂದ್ರದ ಮೂಲಕ ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಔಷದಿ ಪೂರೈಕೆ ,ವಂದೇಭಾರತ್ ರೈಲುಗಳ ದೇಶದ ವಿವಿದೆಡೆಗೆ ಸಂಪರ್ಕ, ಹೀಗೆ ಹಲವಾರು ಯೋಜನೆಗಳನ್ನು ಮೈಸೂರು ಕೊಡಗು ಕ್ಷೇತ್ರಕ್ಕೆ ಕೊಟ್ಟಿದ್ದಾರೆ.

ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದರೊಂದಿಗೆ ಬರುವ ಚುನಾವಣೆಯಲ್ಲಿ ಮತ್ತೆ ನಾವು ಮೋದಿಯವರ ಕೈ ಬಲಪಡಿಸಬೇಕಿದೆ ಶ್ರೇಷ್ಠ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು

ನಮ್ಮ ಪೂರ್ವಜರಂತೆ ಜನರ ನಡುಗೆ ಇದ್ದು ಕೆಲಸ ಮಾಡುತ್ತೇನೆ : ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ಸಿಗರು ಮೈತ್ರಿ ಅಭ್ಯರ್ಥಿ ಯದುವೀರ್ ರವರ ವಿರುದ್ದ ಮಹರಾಜರಾಗಿ ಅರಮನೆಯೊಗಳೆ ಇರುವವರು ಜನರ ಮಧ್ಯೆ ಬಂದು ಸಮಸ್ಯೆ ಬಗೆಹರಿಸುತ್ತಾರಾ ಜನಸಾಮಾನ್ಯರು ಅವರನ್ನು ಭೇಟಿ ಮಾಡಲು ಆಗುತ್ತಾ ಎಂಬ ಅಪಪ್ರಚಾರ ನೆಡೆಸುತ್ತಿದ್ದು ಈಎಲ್ಲಾ ಅಪಪ್ರಚಾರಗಳಿಗೂ ಯದುವೀರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಪೂರ್ವಜರು ಅರಮನೆಯಲ್ಲಿ ಹುಟ್ಟಿದ್ದರೂ ಜನ ಸಾಮನ್ಯರ ನಡುವೆ ಇದ್ದು ನೆರವಾಗುತ್ತಿದ್ದರು ನಾವು ಅವರಂತೆ ನಿಮ್ಮ ನಡುವೆ ಇದ್ದು ನಿಮ್ಮ ಸೇವೆ ಮಾಡುತ್ತೇನೆ ನಿಮ್ಮಗಳ ಸೇವೆ ಮಾಡುವುದು ನನ್ನ ಪಾಲಿನ ಸೌಭಾಗ್ಯವೆಂದು ಭಾವಿಸಿದ್ದೇನೆ ಯಾವುದೆ ಅಪಪ್ರಚಾರಗಳಿಗೆ ಕಿವಿಕೊಡದೆ ನನ್ನನ್ನು ಬೆಂಬಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು.

ಈ ವೇಳೆ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ ದೇವೆಗೌಡ, ಬಿಜೆಪಿ ಯುವ ಮುಖಂಡ ಕವೀಶ್ ಗೌಡ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

12 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

13 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

14 hours ago