ಮೈಸೂರು

ದೇಶದ ಪ್ರಗತಿಗೆ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಿ: ಪ್ರತಾಪ್ ಸಿಂಹ

ಮೈಸೂರು: ದೇಶದ ಪ್ರಗತಿಗೆ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಬೇಕು. ಮದಕರಿ ನಾಯಕ ಮತ್ತು ಓನಕೆ ಒಬವ್ವರನ್ನು ಕೊಂದ ದುಷ್ಟರನ್ನು ನಾಯಕ ಸಮುದಾಯವು ಮರೆಯಬಾರದು. ಅಂತವರ ಕೈಗೆ ಅಧಿಕಾರ ನೀಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸಮಾವೇಶದಲ್ಲಿ ಮಾತನಾಡಿದ ಅವರು ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು 40 ವರ್ಷಗಳಿಂದಲೂ ಇದ್ದ ಬೇಡಿಕೆಯನ್ನು ಈ ಭಾಗದ ಯಾವುದೇ ಸಂಸದರೂ ಪರಿಹರಿಸಲಿಲ್ಲ. ಶ್ರೀಕಂಠದತ್ತ ನರಸಿಂಹರಾಜರ ಆದಿಯಾಗಿ ಎಚ್ ವಿಶ್ವನಾಥ, ಸಿ ಎಚ್ ವಿಜಯಶಂಕರ್ ಅವರು ಸೇರಿದಂತೆ ಯಾವ ಸಂಸದರೂ ನಾಯಕ ಸಮುದಾಯದ ಬೇಡಿಕೆ ಈಡೇರಿಸಿಲ್ಲ. ಆದರೆ, ನಾನು ಸಂಸದನಾಗಿ ನಾಲ್ಕು ವರ್ಷಗಳಲ್ಲಿ ನಾಯಕ ಸಮುದಾಯದ ಬೇಡಿಕೆ ಈಡೇರಿಸಿದೆ ಎಂದರು.

ನಾನು ಸಂಸದನಾಗುವಲ್ಲಿ ನಾಯಕ ಸಮುದಾಯದ ಬೆಂಬಲ ಸಾಕಷ್ಟಿದೆ. ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯ. ಮೈಸೂರಿಗೆ ಸಾಕಷ್ಟು ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕುಟುಂಬದ ಯದುವೀರ್ ಚುನಾವಣೆಗೆ ನಿಂತಿದ್ದು, ನಾಯಕ ಸಮುದಾಯ ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಅವರಿಗೆ ಕತ್ತಿಗುರಾಣಿ ನೀಡಿ ಅಭಿನಂದಿಸಲಾಯಿತು. ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್‌ವಾಲ್, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು, ಮಾಜಿ ಸಚಿವರಾದ ಎಸ್ ಎ ರಾಮದಾಸ್, ಎನ್ ಮಹೇಶ್, ಶಾಸಕ ಟಿ ಎಸ್ ಶ್ರೀವತ್ಸ, ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತ, ಮಾಜಿ ಮಹಾಪೌರ ಶಿವಕುಮಾರ್, ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ, ಕೇಂದ್ರೀಯ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ನಗರಾಧ್ಯಕ್ಷ ಎಲ್ ನಾಗೇಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago