ಮೈಸೂರು

ಮೈಸೂರು-ಕೊಡಗು-ಚಾಮರಾಜನಗರದಲ್ಲಿ ʼಕೈʼ ಅಭ್ಯರ್ಥಿಗೆ ಮತ ನೀಡಿ : ಮರಿತಿಬ್ಬೇಗೌಡ !

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹಾಗೂ ಸುನಿಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ.

ಎರಡನೇ ಬಾರಿಗೆ ೧೦ ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ೨೦೨೪-೨೫ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ ೫೩ ಸಾವಿರ ಕೋಟಿ ರೂ. ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ೮೯ ಸಾವಿರ ಕೋಟಿ ರೂ. ಹಣವನ್ನು ನಿಗದಿಗೊಳಿಸಿದೆ. ಆದರೆ, ೫ ಗ್ಯಾರಂಟಿಗಳನ್ನು ಬಿಜೆಪಿ ಮತ್ತು ಜಾ.ದಳ ಪಕ್ಷದ ನಾಯಕರು ವಿರೋಧಿಸುತ್ತಿರುವುದು ಸರಿ ಇಲ್ಲ ಎಂದು ತಿಳಿಸಿದರು.

ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದುಬಿದ್ದ ವಿಚಾರವನ್ನು ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದು, ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಅನುದಾನ ಬಿಡುಗಡೆ ಮಾಡುವಂತಹ ಕೆಲಸವನ್ನು ಮಾಡಿರುವುದು ವಿಶೇಷವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ  ಮಾಡುತ್ತಿರುವವರು ತಾವು ಕೂಡ ಫಲಾನುಭವಿಗಳಾಗಿರುವುದನ್ನು ಮರೆಯಬಾರದು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌, ನಗರಾಧ್ಯಕ್ಷ ಆರ್.ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು ಸುದ್ದಿಗೋಷ್ಠಿುಂಲ್ಲಿ ಹಾಜರಿದ್ದರು.

ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎನ್.ಮಹೇಶ್ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೆ, ಚುನಾವಣೆ ಮುಂದಿಟ್ಟುಕೊಂಡು ಜಾತಿ ವಿಚಾರವಾಗಿ ಮಾತನಾಡಿರುವ ಬಗ್ಗೆ ರಾಜ್ಯ ಹಾಗೂ ಜಿಲ್ಲಾ ಚುನಾವಣಾಧಿಕಾರಿಗೆ ಎನ್.ಮಹೇಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ ಚುನಾವಣೆ ಮುಗಿಯುವವರೆಗೂ ಅವರು ಯಾವ ಪ್ರಚಾರವು ಮಾಡಬಾರದೆಂದು ದೂರು ನೀಡಲಾಗಿದೆ.
ಡಾ.ಬಿ.ಜೆ.ವಿಜುಂ ಕುವಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

12 mins ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

38 mins ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

44 mins ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

52 mins ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

1 hour ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

2 hours ago