ಮೈಸೂರು

ಏ.26ರಂದು ತಪ್ಪದೇ ಮತದಾನ ಮಾಡಿ : ಧರಣೇಶ್

ಮೈಸೂರು :  ಮತದಾನ ಮಾಡುವುದು ಭಾರತೀಯ ಪ್ರಜೆಗಳಾದ ನಮ್ಮ ಹಕ್ಕು ಮತ್ತು ಕರ್ತವ್ಯ ಆದ್ದರಿಂದ ಇದೇ ಏಪ್ರಿಲ್ 26ರ ಮತದಾನದ ದಿನ ತಪ್ಪದೇ ಮತದಾನ ಮಾಡುವಂತೆ ಸಾರ್ವಜನಿಕರಿಗೆ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ -2024ರ ಹಿನ್ನೆಲೆ ಗುರುವಾರ ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ವೃತದಲ್ಲಿ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಭಾರತ ಸಂವಿಧಾನದಲ್ಲಿ ಮತದಾನ ಮಾಡುವ ಹಕ್ಕನ್ನು 18 ವರ್ಷ ತುಂಬಿದ ಎಲ್ಲರಿಗೂ ಅವಕಾಶ ಕಲ್ಪಸಲಾಗಿದೆ. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ನಾಯಕರನ್ನು ನೀವೇ ಆಯ್ಕೆ ಮಾಡಿಕೊಳ್ಳುವ ಅಧಿಕಾರ ನಿಮ್ಮ ಕೈಯಲ್ಲಿದೆ. ಹಕ್ಕನ್ನು ಚಾಚು ತಪ್ಪದೇ ಪಾಲಿಸಿ ಎಂದು ಹೇಳಿದರು.

ಮತದಾನದಿಂದ ಯಾರು ದೂರ ಉಳಿಯಬಾರದು, ನಿಮ್ಮ ನೆರೆಹೊರೆಯ ವರಿಗೂ ತಿಳಿಸಿ, ‘ಮತದಾರರ ನಡೆ ಮತಗಟ್ಟೆಯ ಕಡೆ’
ಇರಬೇಕು ಆಗ ಮಾತ್ರ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯ ಎಂದು ಹೇಳಿದರು.

ಡಿ.ಬಿ.ಕುಪ್ಪೆ, ಹೊಸೂರು, ಬಾವಲಿ ಹಾಗೂ ಆನೆ ಮಾಳದ ಹಾಡಿಗಳಿಗೆ ತೆರಳಿ ಚುನಾವಣಾ ಪೋಸ್ಟರ್ ಅಂಟಿಸಿ, ಮತದಾನ ಪ್ರತಿಜ್ಞಾವಿಧಿ ಬೋಧಿಸಿ ಯಾವುದೇ ಆಸೆ – ಆಮಿಷಗಳಿಗೆ ಮರಳಾದೆ ವಿವೇಚನೆಯಿಂದ ಮತದಾನ ಮಾಡುವಂತೆ ಜನರಿಗೆ ಅರಿವು ಮೂಡಿಸಲಾಯಿತು.

ಈ ವೇಳೆ ತಹಶೀಲ್ದಾರ್ ಶ್ರೀನಿವಾಸ್, ಸಹಾಯಕ ನಿರ್ದೇಶಕರು (ಗ್ರಾ.ಉ) ರಘುನಾಥ್ ಕೆ.ಎಂ, ತಾಲ್ಲೂಕು ಯೋಜನಾಧಿಕಾರಿ ರಂಗಸ್ವಾಮಿ ಕೆ, ಪಿಡಿಒ ದೇವರಾಜು ಎಂ.ಕೆ, ಐಇಸಿ ಸಂಯೋಜಕ ನಿಂಗರಾಜು ಹಾಗೂ ಗ್ರಾ.ಪಂ ಸಿಬ್ಬಂದಿ ಇದ್ದರು.

ಪೋಟೋ ಶೀರ್ಷಿಕೆ: ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಾಳ ಹಾಡಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಹಾಡಿ ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

23 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago