ಮೈಸೂರು

ಏ.26ರಂದು ತಪ್ಪದೇ ಮತದಾನ ಮಾಡಿ : ಧರಣೇಶ್

ಮೈಸೂರು :  ಮತದಾನ ಮಾಡುವುದು ಭಾರತೀಯ ಪ್ರಜೆಗಳಾದ ನಮ್ಮ ಹಕ್ಕು ಮತ್ತು ಕರ್ತವ್ಯ ಆದ್ದರಿಂದ ಇದೇ ಏಪ್ರಿಲ್ 26ರ ಮತದಾನದ ದಿನ ತಪ್ಪದೇ ಮತದಾನ ಮಾಡುವಂತೆ ಸಾರ್ವಜನಿಕರಿಗೆ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ -2024ರ ಹಿನ್ನೆಲೆ ಗುರುವಾರ ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ವೃತದಲ್ಲಿ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಭಾರತ ಸಂವಿಧಾನದಲ್ಲಿ ಮತದಾನ ಮಾಡುವ ಹಕ್ಕನ್ನು 18 ವರ್ಷ ತುಂಬಿದ ಎಲ್ಲರಿಗೂ ಅವಕಾಶ ಕಲ್ಪಸಲಾಗಿದೆ. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ನಾಯಕರನ್ನು ನೀವೇ ಆಯ್ಕೆ ಮಾಡಿಕೊಳ್ಳುವ ಅಧಿಕಾರ ನಿಮ್ಮ ಕೈಯಲ್ಲಿದೆ. ಹಕ್ಕನ್ನು ಚಾಚು ತಪ್ಪದೇ ಪಾಲಿಸಿ ಎಂದು ಹೇಳಿದರು.

ಮತದಾನದಿಂದ ಯಾರು ದೂರ ಉಳಿಯಬಾರದು, ನಿಮ್ಮ ನೆರೆಹೊರೆಯ ವರಿಗೂ ತಿಳಿಸಿ, ‘ಮತದಾರರ ನಡೆ ಮತಗಟ್ಟೆಯ ಕಡೆ’
ಇರಬೇಕು ಆಗ ಮಾತ್ರ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯ ಎಂದು ಹೇಳಿದರು.

ಡಿ.ಬಿ.ಕುಪ್ಪೆ, ಹೊಸೂರು, ಬಾವಲಿ ಹಾಗೂ ಆನೆ ಮಾಳದ ಹಾಡಿಗಳಿಗೆ ತೆರಳಿ ಚುನಾವಣಾ ಪೋಸ್ಟರ್ ಅಂಟಿಸಿ, ಮತದಾನ ಪ್ರತಿಜ್ಞಾವಿಧಿ ಬೋಧಿಸಿ ಯಾವುದೇ ಆಸೆ – ಆಮಿಷಗಳಿಗೆ ಮರಳಾದೆ ವಿವೇಚನೆಯಿಂದ ಮತದಾನ ಮಾಡುವಂತೆ ಜನರಿಗೆ ಅರಿವು ಮೂಡಿಸಲಾಯಿತು.

ಈ ವೇಳೆ ತಹಶೀಲ್ದಾರ್ ಶ್ರೀನಿವಾಸ್, ಸಹಾಯಕ ನಿರ್ದೇಶಕರು (ಗ್ರಾ.ಉ) ರಘುನಾಥ್ ಕೆ.ಎಂ, ತಾಲ್ಲೂಕು ಯೋಜನಾಧಿಕಾರಿ ರಂಗಸ್ವಾಮಿ ಕೆ, ಪಿಡಿಒ ದೇವರಾಜು ಎಂ.ಕೆ, ಐಇಸಿ ಸಂಯೋಜಕ ನಿಂಗರಾಜು ಹಾಗೂ ಗ್ರಾ.ಪಂ ಸಿಬ್ಬಂದಿ ಇದ್ದರು.

ಪೋಟೋ ಶೀರ್ಷಿಕೆ: ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಾಳ ಹಾಡಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಹಾಡಿ ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

4 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

4 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

5 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

6 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

6 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

14 hours ago