ಮೈಸೂರು

ವೋಟ್‌ ಚೋರಿ : ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ

ಮೈಸೂರು : ಮತಗಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ‘ವೋಟ್ ಚೋರಿ ಸಹಿ ಸಂಗ್ರಹ’ ಅಭಿಯಾನವನ್ನೂ ಅರಮನೆ ನಗರಿ ಮೈಸೂರಿನಲ್ಲೂ ನಡೆಸಲಾಯಿತು.

ನಗರದ ಗಾಂಧಿವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಚಾಲನೆ ನೀಡಿದರು. ಕಾಂಗ್ರೆಸ್‌ನ ಮುಖಂಡರು, ಕಾರ್ಯಕರ್ತರು ಪುಸ್ತಕದಲ್ಲಿ ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಿದರು.

ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಮಾತನಾಡಿ, ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ಸರ್ವಾಽಕಾರಿ ಧೋರಣೆ ಪ್ರವೃತ್ತಿ ಎದ್ದು ಕಾಣುತ್ತಿದೆ. ಐದು ವರ್ಷಗಳ ಬದಲಿಗೆ ನೂರು ದಿನಗಳ ಆಡಳಿತ ದೊರತರೆ ದಿನನಿತ್ಯದ ವಸ್ತುಗಳ ಬೆಲೆ ಇಳಿಸುವೆ ಎಂದಿದ್ದರು. ಆದರೆ, ಈವರೆಗೆ ಬೆಲೆಗಳು ಇಳಿಕೆಯಾಗಿಲ್ಲ. ದಿನದಿಂದ ದಿನಕ್ಕೆ ಜನಸಾಮಾನ್ಯರು ಬಳಸುವ ವಸ್ತುಗಳು ಹೆಚ್ಚಾಗುತ್ತಿವೆ. ಇದೇನಾ ಅಚ್ಚೇ ದಿನ ಎಂದು ಪ್ರಶ್ನಿಸಿದರು.

ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಪೂರ್ವಕ್ಕೂ ಮುನ್ನ ಹುಟ್ಟಿದ ಕಾಂಗ್ರೆಸ್ ದೇಶದ ಎಲ್ಲ ಧರ್ಮ, ಜಾತಿಯನ್ನು ಸಮಾನತೆಯಿಂದ ಕೊಂಡೊಯ್ಯುವ ಕೆಲಸ ಮಾಡಿಕೊಂಡು ಬಂದಿದೆ. ದೇಶದಲ್ಲಿ ಯಾರೇ ತಪ್ಪು ಮಾಡಿದರೂ ಅದನ್ನು ತಿದ್ದುವ ಕೆಲಸ ಮಾಡಲಿದೆ. ಅಧಿಕಾರ ಇಲ್ಲವೆಂದು ಮನೆಯಲ್ಲಿ ಕೂರದೆ ಜನಪರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಬಿಜೆಪಿಯವರು ಒಂದೊಂದು ರೀತಿಯ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಬಿಜೆಪಿ ಮತದಾರರನ್ನು ಸೇರಿಸಿದರೆ, ಕಾಂಗ್ರೆಸ್ ಮತದಾರರು ಇರುವ ಕಡೆಗಳಲ್ಲಿ ತೆಗೆಯುವ ಕೆಲಸ ಮಾಡಲಾಗುತ್ತಿದೆ. ಖಾಲಿ ನಿವೇಶನ, ಮನೆಗಳಲ್ಲಿ ಸೇರಿಸಿದ್ದರಿಂದ ೨೩ ಸಾವಿರ ಮತದಾರರನ್ನು ಸೇರಿಸಿ ಮತಗಳ್ಳತನ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಶಿವಪ್ರಸಾದ್, ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರ್ ಎಲ್.ಗೌಡ, ಈಶ್ವರ್ ಡಿ.ಚಕ್ಕಡಿ, ಎಂ.ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಲತಾ ಸಿದ್ದಶೆಟ್ಟಿ, ಮಾಜಿ ಮಹಾಪೌರರಾದ ಟಿ.ಬಿ. ಚಿಕ್ಕಣ್ಣ, ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮೋದಾಮಣಿ, ಪುಷ್ಪಲತಾ ಜಗನ್ನಾಥ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸುಶೀಲ ಕೇಶವಮೂರ್ತಿ, ನಗರಪಾಲಿಕೆ ಮಾಜಿ ಸದಸ್ಯರಾದ ಎಂ.ಪ್ರದೀಪ್ ಕುಮಾರ್, ಕೆ.ವಿ.ಮಲ್ಲೇಶ್, ಕೆಪಿಸಿಸಿ ಎಚ್.ಎ.ವೆಂಕಟೇಶ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜಿಪಂ ಮಾಜಿ ಸದಸ್ಯರಾದ ಸುಧಾ ಮಹದೇವಯ್ಯ, ಡಾ.ಸುಜಾತ ಶ್ರೀನಿವಾಸ ರಾವ್, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ವಕ್ತಾರ ಕೆ.ಮಹೇಶ್, ಸೋಮಶೇಖರ್, ಗಿರೀಶ್ ನಾಯಕ, ಡೈರಿ ವೆಂಕಟೇಶ್, ಮರಿದೇವಯ್ಯ, ಮಂಚೇಗೌಡನಕೊಪ್ಪಲು ರವಿ, ಹಿಂದುಳಿದ ವರ್ಗಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಆರ್.ನಾಗೇಶ್, ಜವರಪ್ಪ, ಉತ್ತನಹಳ್ಳಿ ಶಿವಣ್ಣ, ಎಂ.ಕೆ.ಅಶೋಕ್, ರೋಹಿತ್ ನಾಯಕ, ಸಾ.ಮ.ಯೋಗೀಶ್, ವಿಶ್ವ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

4 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

9 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

9 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

9 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

9 hours ago