ಮೈಸೂರು

ಇಂದಿನಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯ ಹಂಚಿಕೆ: ಡಾ ಕೆ ವಿ ರಾಜೇಂದ್ರ

ಮೈಸೂರು: ಮತದಾನದ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಮತದಾರರು ಮತದಾನ ಮಾಡಲು ಮುಂದೆ ಬರುವಂತೆ ಮಾಡಲು ಇಂದಿನಿಂದ ಮತದಾರರ ಮಾಹಿತಿ ಚೀಟಿಯನ್ನು ಹಂಚಲಾಗುವುದು. ಇದರಿಂದ ಮತದಾರರು ಆ ಚೀಟಿಯ ಹಿಂಭಾಗದಲ್ಲಿರುವ ಕ್ಯೂ ಆರ್ ಕೋಡನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಪೋಲಿಂಗ್ ಸ್ಟೇಷನ್ನ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ ರಾಜೇಂದ್ರ ಮಾಹಿತಿ ನೀಡಿದರು.

ಇಂದು ಚೆಸ್ಕಾಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ಬಲೂನ್ ಅನಾವರಣ ಹಾಗೂ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೂತ್ ಮಟ್ಟದ ಅಧಿಕಾರಿಗಳಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ಹಂಚಿಕೆ ಮಾಡಿಸಲಾಗುತ್ತದೆ ಹಾಗೂ ಮತದಾನ ಮಾರ್ಗದರ್ಶಿಗಳಿಂದ ಅವರಿಗೆ ಮಾಹಿತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಚುನಾವಣೆಯನ್ನು ಯಶಸ್ವಿಗೊಳಿಸಲು ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸಲು ಸೆಸ್ಕಾಂನವರು ನಮ್ಮೊಂದಿಗೆ ಸೇರಿ ತಮ್ಮ ಸಿಬ್ಬಂದಿಗಳಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ತಲುಪುವಂತೆ ಮಾಡಬೇಕು. ಆಗ ಮಾತ್ರವೇ ನಮ್ಮ ಉದ್ದೇಶ ಸಫಲವಾಗುವುದು ಎಂದರು.

ಜಿಲ್ಲಾ ಸ್ವೀಪ್ ಸಮಿತಿಯು ಚುನಾವಣೆಯನ್ನು ಯಶಸ್ವಿಯಾಗಿಸಲು ಗ್ರಾಮ, ತಾಲೂಕು ಹಾಗೂ ಪಾಲಿಕೆಯ ವ್ಯಾಪ್ತಿಯಲ್ಲಿ ವಿವಿಧ ರೀತಿಯ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾರರಲ್ಲಿ ನೈತಿಕ ಮತದಾನ ಮಾಡಲು ಪ್ರೇರೇಪಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಶೀಲಾ ಅವರು ಮಾತನಾಡಿ, ಹಿಂದೆಂದೂ ಆಗಿರದಷ್ಟು ಮತದಾನವನ್ನು ಈ ಬಾರಿಯ ಚುನಾವಣೆಯಲ್ಲಿ ಆಗುವಂತೆ ಮಾಡಬೇಕು. ವಿಭಿನ್ನವಾಗಿ ಜನರ ಮುಂದೆ ಮತದಾನದ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಅವರಿಗೂ ಮತದಾನ ಮಾಡಲೇಬೇಕೆಂಬ ಮನೋಭಾವ ಉಂಟಾಗುತ್ತದೆ. ಇದರಿಂದ ಮತದಾನ ಹೆಚ್ಚಳದ ಉದ್ದೇಶ ಸಫಲವಾಗುತ್ತದೆ ಎಂದರು.

ಕನ್ನಡದ ಚಲನಚಿತ್ರ ನಟರಾದ ಜಿಮ್ ರವಿ ನವರು ಮಾತನಾಡಿ, ಮತದಾನ ಎಂಬುದು ಒಂದು ಹಬ್ಬದ ಹಾಗೆ ಇದರಲ್ಲಿ ಎಲ್ಲರೂ ನೈತಿಕವಾಗಿ ಭಾಗವಹಿಸಬೇಕು. ಸದೃಢ ದೇಹಬೇಕೆಂದರೆ ಪ್ರತಿನಿತ್ಯವು ವ್ಯಾಯಾಮ ಮಾಡಬೇಕು ಅದೇ ರೀತಿಯಾಗಿ ದೇಶವನ್ನು ಅಭಿವೃದ್ಧಿಗೊಳಿಸಲು ಉತ್ತಮ ನಾಯಕನ ಆಯ್ಕೆ ಮಾಡಲು ಕಡ್ಡಾಯವಾಗಿ ಮತದಾನ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನ ಚುನಾವಣೆಯ ದಿನದಂದು ರಜಾ ದಿನ ಎಂದು ಭಾವಿಸುತ್ತಾರೆ ಆದರೆ ಅದು ತಪ್ಪು ಮತದಾನ ನಮ್ಮೆಲ್ಲರ ಹಕ್ಕು ಆ ದಿನದಂದು ಪ್ರತಿಯೊಬ್ಬರು ತಮ್ಮ ಮತ ಚಲಾಯಿಸಬೇಕು ಎಂದರು.

ಮತದಾರರು ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೆ ನೈತಿಕವಾಗಿ ನಿಮ್ಮ ಮತವನ್ನು ಚಲಾಯಿಸುವ ಮೂಲಕ ಈ ಬಾರಿ ಮೈಸೂರಿನಲ್ಲಿ ಶೇಕಡ ನೂರಕ್ಕೆ ನೂರರಷ್ಟು ಮತದಾನ ಮಾಡುವುದಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆಎಂ ಗಾಯತ್ರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಎನ್ ಎನ್ ಮಧು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago