ಮೈಸೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ-ಜೆಡಿಎಸ್ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಇಂದು(ನ.25) ಮಲೆ ಮಹದೇಶ್ವರ ಸ್ವಾಮಿಯ 54ನೇ ಉತ್ಸವಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಚುನಾವಣೆಯ ಮೊದಲು ನೀಡಿದ್ದಂತಹ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅವುಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ. ಹೀಗಾಗಿ ಮತದಾರರಿಗೆ ಗ್ಯಾರಂಟಿ ಯೋಜನೆಗಳು ಮೆಚ್ಚುಗೆಯಾಗಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರು ಎಂದಿದ್ದಾರೆ.
ರಾಜ್ಯದ ಉಪಚುನಾವಣೆಯ ವೇಳೆ ಮೈತ್ರಿ ಪಕ್ಷಗಳು ನಮ್ಮ ಸರ್ಕಾರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಅಬ್ಬರದ ಪ್ರಚಾರ ಮಾಡಿದ್ದರು. ಅಲ್ಲದೇ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರು. ಆದರೆ ಮತದಾರರು ಅವುಗಳೆಲ್ಲವನ್ನು ಮೆಟ್ಟಿ ನಿಂತು ಆ ಹೇಳಿಕೆಗಳಿಗೆ ಕಿವಿಗೊಡದೆ ಮೈತ್ರಿಯನ್ನು ತಿರಸ್ಕರಿಸಿದ್ದಾರೆ. ಜೊತೆಗೆ ಅದಕ್ಕೆ ಪೂರಕವಾಗಿ ಚುನಾವಣಾ ಫಲಿತಾಂಶದಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…