ಮೈಸೂರು

ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಹಕ್ಕನ್ನು ಚಲಾಯಿಸಬೇಕು -ಡಾ. ಕೆ ವಿ ರಾಜೇಂದ್ರ

ಮೈಸೂರು :  ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.

ಇಂದು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಎಂಬುದು ಹಬ್ಬವಿದ್ದಂತೆ ಅದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.

ಈಗಾಗಲೇ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರಗಳು ಸಿದ್ದವಾಗಿದ್ದು, ಇ ವಿ ಎಂ ಗಳನ್ನು ರಾಂಡಮೈಸೇಶನ್ ಮಾಡಿಪ್ರತಿಯೊಂದು ಅಸೆಂಬ್ಲಿ ವಿಭಾಗದ ಸ್ಟ್ರಾಂಗ್ ರೂಂ ಗೆ ಕಳುಹಿಸಿಕೊಡಲಾಗಿದೆ ಎಂದರು.

ಮೈಸೂರಿನಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನದ ದಿನಾಂಕವನ್ನು ತಿಳಿಸಿ ಮೈಸೂರಿನ ಜನರನ್ನು ಆಕರ್ಷಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಜನರಿಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮ ಆಯೋಜಿಸಿ ಅದರ ಬಗ್ಗೆ ಜನರಲ್ಲಿ ಮೂಡಿಸಲಾಗಿತ್ತದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ 2915 ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಕಡಿಮೆ ಮತದಾನ ಆಗುತ್ತಿರುವ ಸ್ಥಳವನ್ನು ಗುರುತಿಸಿ ಅಲ್ಲಿ ಸ್ವೀಟ್ ಚಟುವಟಿಕೆಗಳನ್ನು ನಡೆಸಲು ಯೋಚನೆ ಮಾಡಲಾಗಿದೆ ಎಂದರು.

2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 70ರಷ್ಟು ಮತದಾನವಾಗಿದ್ದು, ಈ ಬಾರಿ ಶೇಕಡ 75ರಷ್ಟು ನ್ನು ದಾಟಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ ಮಧು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

andolanait

Recent Posts

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

15 mins ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

45 mins ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…

51 mins ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

1 hour ago

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

2 hours ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

3 hours ago