ಮೈಸೂರು

ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಹಕ್ಕನ್ನು ಚಲಾಯಿಸಬೇಕು -ಡಾ. ಕೆ ವಿ ರಾಜೇಂದ್ರ

ಮೈಸೂರು :  ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.

ಇಂದು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಎಂಬುದು ಹಬ್ಬವಿದ್ದಂತೆ ಅದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.

ಈಗಾಗಲೇ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರಗಳು ಸಿದ್ದವಾಗಿದ್ದು, ಇ ವಿ ಎಂ ಗಳನ್ನು ರಾಂಡಮೈಸೇಶನ್ ಮಾಡಿಪ್ರತಿಯೊಂದು ಅಸೆಂಬ್ಲಿ ವಿಭಾಗದ ಸ್ಟ್ರಾಂಗ್ ರೂಂ ಗೆ ಕಳುಹಿಸಿಕೊಡಲಾಗಿದೆ ಎಂದರು.

ಮೈಸೂರಿನಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನದ ದಿನಾಂಕವನ್ನು ತಿಳಿಸಿ ಮೈಸೂರಿನ ಜನರನ್ನು ಆಕರ್ಷಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಜನರಿಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮ ಆಯೋಜಿಸಿ ಅದರ ಬಗ್ಗೆ ಜನರಲ್ಲಿ ಮೂಡಿಸಲಾಗಿತ್ತದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ 2915 ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಕಡಿಮೆ ಮತದಾನ ಆಗುತ್ತಿರುವ ಸ್ಥಳವನ್ನು ಗುರುತಿಸಿ ಅಲ್ಲಿ ಸ್ವೀಟ್ ಚಟುವಟಿಕೆಗಳನ್ನು ನಡೆಸಲು ಯೋಚನೆ ಮಾಡಲಾಗಿದೆ ಎಂದರು.

2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 70ರಷ್ಟು ಮತದಾನವಾಗಿದ್ದು, ಈ ಬಾರಿ ಶೇಕಡ 75ರಷ್ಟು ನ್ನು ದಾಟಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ ಮಧು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago