ಮೈಸೂರು : ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಪುರಭವನ(ಟೌನ್ ಹಾಲ್)ದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರ್ಯಾಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, 70 ರಿಂದ 75 ವರ್ಷಗಳ ಇತಿಹಾಸವಿರುವ ಈ ಚುನಾವಣೆ ಮತ್ತು ವಿಂಟೇಜ್ ಕಾರ್ ಅನ್ನು ಹೋಲಿಸಿದರೆ ಪ್ರತಿವರ್ಷವೂ ಅದರ ಮಹತ್ವ ಹಾಗೂ ಛಾಪು ಹೆಚ್ಚಾಗುತ್ತಲೇ ಇದೆ ಎಂದರು.
ಪ್ರಜೆಗಳೆಲ್ಲರೂ ಪ್ರಜಾಪ್ರಭುತ್ವ ಮತ್ತು ಚುನಾವಣೆಯ ಯಜಮಾನರು. ಇದನ್ನು ಹೆಚ್ಚಿನ ಜಾಗರೂಕತೆಯಿಂದ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಹಾಗಾಗಿ ಪ್ರತಿಭರಿಯೂ ಚುನಾವಣಾ ಹಬ್ಬದ ಮೆರಗನ್ನು ಹೆಚ್ಚಿಸಲು ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ಮತದಾರನು ಈ ದೇಶದ ಹಾಗೂ ಪ್ರಜಾಪ್ರಭುತ್ವದ ಆಸ್ತಿ. ಮತದಾರರು ಯಾವುದೇ ರೀತಿಯ ಚುನಾವಣಾ ಅಕ್ರಮವನ್ನು ಮಾಡದೆ ನೈತಿಕ ಮತದಾನವನ್ನು ಮಾಡಿ ಬೇರೆಯವರಿಗೂ ನೈತಿಕ ಮತದಾನ ಮಾಡುವಂತೆ ಅರಿವು ಮೂಡಿಸಬೇಕು ಎಂದರು.
ಕಳೆದ 2018 ರ ಚುನಾವಣೆಯಲ್ಲಿ ಮೈಸೂರಿನಲ್ಲಿ ಶೇ.70 ರಷ್ಟು ಮತದಾನವಾಗಿದ್ದು, ಈ ಬಾರಿ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಫ್ಲಾಶ್ ಮಾಬ್, ರ್ಯಾಲಿ ಸೇರಿದಂತೆ ಮಾಲ್, ಅಪಾರ್ಟ್ಮೆಂಟ್ ಹೀಗೆ ನಗರದಾಧ್ಯಂತ ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಿ ನಗರ ಪ್ರದೇಶದ ಮತದಾರರು ಹಾಗೂ ಯುವಜನರನ್ನು ಸೆಳೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಎಷ್ಟೋ ಜನರು ಅಕ್ಷರಸ್ಥರಾಗಿದ್ದರು ಸಹ ಮತದಾನದ ವಿಷಯದಲ್ಲಿ ಪ್ರಜ್ಞಾವಂತರಾಗಿರುವುದಿಲ್ಲ ಅಂತಹವರಿಗೂ ಸಹ ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ಮಾಡುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತು ಕಡ್ಡಾಯವಾಗಿ ಮತ ಹಾಕಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾದ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಎನ್ ಎನ್ ಮಧು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…