ಮೈಸೂರು

ವಿಂಟೇಜ್ ಕಾರ್ ರ್ಯಾಲಿಯ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ

ಮೈಸೂರು : ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಪುರಭವನ(ಟೌನ್ ಹಾಲ್)ದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರ್ಯಾಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, 70 ರಿಂದ 75 ವರ್ಷಗಳ ಇತಿಹಾಸವಿರುವ ಈ ಚುನಾವಣೆ ಮತ್ತು ವಿಂಟೇಜ್ ಕಾರ್ ಅನ್ನು ಹೋಲಿಸಿದರೆ ಪ್ರತಿವರ್ಷವೂ ಅದರ ಮಹತ್ವ ಹಾಗೂ ಛಾಪು ಹೆಚ್ಚಾಗುತ್ತಲೇ ಇದೆ ಎಂದರು.

ಪ್ರಜೆಗಳೆಲ್ಲರೂ ಪ್ರಜಾಪ್ರಭುತ್ವ ಮತ್ತು ಚುನಾವಣೆಯ ಯಜಮಾನರು. ಇದನ್ನು ಹೆಚ್ಚಿನ ಜಾಗರೂಕತೆಯಿಂದ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಹಾಗಾಗಿ ಪ್ರತಿಭರಿಯೂ ಚುನಾವಣಾ ಹಬ್ಬದ ಮೆರಗನ್ನು ಹೆಚ್ಚಿಸಲು ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ಮತದಾರನು ಈ ದೇಶದ ಹಾಗೂ ಪ್ರಜಾಪ್ರಭುತ್ವದ ಆಸ್ತಿ. ಮತದಾರರು ಯಾವುದೇ ರೀತಿಯ ಚುನಾವಣಾ ಅಕ್ರಮವನ್ನು ಮಾಡದೆ ನೈತಿಕ ಮತದಾನವನ್ನು ಮಾಡಿ ಬೇರೆಯವರಿಗೂ ನೈತಿಕ ಮತದಾನ ಮಾಡುವಂತೆ ಅರಿವು ಮೂಡಿಸಬೇಕು ಎಂದರು.

ಕಳೆದ 2018 ರ ಚುನಾವಣೆಯಲ್ಲಿ ಮೈಸೂರಿನಲ್ಲಿ ಶೇ.70 ರಷ್ಟು ಮತದಾನವಾಗಿದ್ದು, ಈ ಬಾರಿ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಫ್ಲಾಶ್ ಮಾಬ್, ರ್ಯಾಲಿ ಸೇರಿದಂತೆ ಮಾಲ್, ಅಪಾರ್ಟ್ಮೆಂಟ್ ಹೀಗೆ ನಗರದಾಧ್ಯಂತ ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಿ ನಗರ ಪ್ರದೇಶದ ಮತದಾರರು ಹಾಗೂ ಯುವಜನರನ್ನು ಸೆಳೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎಷ್ಟೋ ಜನರು ಅಕ್ಷರಸ್ಥರಾಗಿದ್ದರು ಸಹ ಮತದಾನದ ವಿಷಯದಲ್ಲಿ ಪ್ರಜ್ಞಾವಂತರಾಗಿರುವುದಿಲ್ಲ ಅಂತಹವರಿಗೂ ಸಹ ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವನ್ನು ಸ್ವೀಪ್ ಸಮಿತಿ ಮಾಡುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತು ಕಡ್ಡಾಯವಾಗಿ ಮತ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾದ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಎನ್ ಎನ್ ಮಧು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

23 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

23 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

23 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

23 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

24 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

24 hours ago