ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : ಮತಗಟ್ಟೆಯತ್ತ ಸುಳಿಯದ ಮತದಾರರು

ಮೈಸೂರು : ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸುವ ಮೂಲಕ ಇಡೀ ರಾಜ್ಯ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದ್ರೆ ಚಾಮುಂಡೇಶ್ವರಿ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಗ್ರಾಮಸ್ಥರು ಮತ ಹಾಕುವುದಿಲ್ಲ ಎಂದು ಮತದಾನ ಬಹಿಷ್ಕರಿಸಿದ್ದಾರೆ.
ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದು ಚುನಾವಣಾ ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದಾರೆ.
ಇಂದು ಮತದಾನ ಹಿನ್ನೆಲೆ ಚುನಾವಣೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಬೆಳಗ್ಗೆ 7 ಗಂಟೆಯಿಂದಲೂ ಕಾಯುತ್ತಿದ್ದಾರೆ. ಆದ್ರೆ ಇದುವರೆಗೂ ಒಬ್ಬ ಮತದಾರನೂ ಮತಗಟ್ಟೆಗೆ ಭೇಟಿ ನೀಡಿಲ್ಲ. ಅದರಲ್ಲೂ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಸಹ ಮತಗಟ್ಟೆಯತ್ತ ತಲೆ ಹಾಕಿಲ್ಲ. ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಿದೆ.
ನಾವ್ಯಾಕೆ ವೋಟ್ ಹಾಕಬೇಕು. ತಮ್ಮ 5 ವರ್ಷ ಅವಧಿಯಲ್ಲಿ ಒಂದು ರೋಡ್ ಸಹ ಮಾಡಿಸಿಲ್ಲ. ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ ಎಂದ ಮೇಲೆ ವೋಟ್ ಯಾಕೆ ಮಾಡಬೇಕು. ಯುಜಿಡಿ ಮಾಡಿಸಿಲ್ಲ, ಒಂದು ರಸ್ತೆ ಮಾಡಿಕೊಟ್ಟಿಲ್ಲ ಹಾಗಾಗಿ ನಾವು ಯಾರಿಗೂ ವೋಟ್ ಮಾಡಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಈ ನಡುವೆ ಗ್ರಾಮಸ್ಥರ ಮನವೊಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದು ಗ್ರಾಮಸ್ಥರು ಮಾತ್ರ ಯಾವುದಕ್ಕೂ ಒಪ್ಪುತ್ತಿಲ್ಲ. ನಮ್ಮದು ಕೊನೆಯ ಗ್ರಾಮ ಎಂದು ಯಾರು ತಿರುಗಿಯೂ ನೋಡಲ್ಲ. ಈ ಹಿನ್ನೆಲೆ ನಾವೆಲ್ಲ ವೋಟ್ ಮಾಡಬಾರದು ಎಂದು ಡಿಸೈಡ್ ಮಾಡಿದ್ದೇವೆ ಎಂದು ಅಧಿಕಾರಿಗಳಿಗೆಯೇ ತಿಳಿ ಹೇಳಿ ಕಳಿಸಿದ್ದಾರೆ. ಇತ್ತ ಮತದಾರರು ಬಾರದೆ ಚುನಾವಣೆ ಅಧಿಕಾರಿಗಳು ಸುಮ್ಮನೆ ಕುಳಿತಿರುವ ದೃಶ್ಯಗಳು ಕಂಡು ಬಂದಿವೆ.
lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago