ಮೈಸೂರು

ನಗರದಲ್ಲಿ ವಿವಿಧ ಮಠಾಧೀಶರು ಹಾಗೂ ರಾಜಕಾರಣಿಗಳಿಂದ ಮತ ಚಲಾವಣೆ !

ಮೈಸೂರು : ಲೋಕಸಭಾ ಚುನಾವಣೆಯ ದಿನವಾದ ಇಂದು ರಾಜ್ಯದ ೧೪ ಕ್ಷೇತ್ರದಲ್ಲಿ ಮೊದಲನೆ ಹಂತದ ಮತದಾನ ನಡೆಯುತ್ತಿದೆ.

ಈ ವೇಳೆ ನಗರದಲ್ಲಿ ವಿವಿಧ ಮಠಾಧೀಶರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಜಿಗಳವರು ಇಂದು ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುತ್ತೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಪ್ರಜಾಪ್ರಭುತ್ವವನ್ನು ಉಳಿಸಿ ಇದು ನಮ್ಮೆಲ್ಲರ ಹಕ್ಕು ಎಂದು ಸಾರ್ವಜನಿಕರಿಗೆ ಸಂದೇಶ ಸಾರಿದರು.

ನಗರದ ಅವದೂತ ದತ್ತಪೀಠದ ಹಿರಿಯ ಪೀಠಾಧಿಪತಿಗಳಾದ  ಗಣಪತಿ ಸಚ್ಚಿದಾನಂದಾ ಸ್ವಾಮೀಜಿ ಹಾಗೂ ಬಾಲ ಸ್ವಾಮೀಜಿಗಳಾದ ದತ್ತ ವಿಜಯಾನಾಂದ ತೀರ್ಥ ಸ್ವಾಮೀಜಿಗಳು ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬೂತ್ ನಂಬರ್ 237ರಲ್ಲಿ ತಮ್ಮ ಮತ ಚಲಾಯಿಸಿದರು.

ಮೈಸೂರ್ ನಗರ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಲ್ ನಾಗೇಂದ್ರ ಅವರು ಒಂಬತ್ತು ಗಂಟೆಗೆ ಜಯನಗರದ ಬಾಲೋಧ್ಯಾನ ಇಂಗ್ಲಿಷ್ ಶಾಲೆಯಲ್ಲಿ ತಮ್ಮ ಮತ ಚಲಾಯಿಸುವರು.

ಇನ್ನು ಕೆ.ಅರ್.ಕ್ಷೇತ್ರದ.ಶಾಸಕರಾದ ಟಿ.ಎಸ್.ಶ್ರೀವತ್ಸ ರವರು ಸರತಿ ಸಾಲಿನಲ್ಲಿ ನಿಂತು ಬೆಳ್ಳಗೆ 7.30 ಕ್ಕೆ ವಾರ್ಡ್ ನಂಬರ್ 51 ಬೂತ್ ನಂಬರ್ 139 (ಸಂಸ್ಕೃತ ಪಾಠಶಾಲೆಯಲ್ಲಿ) ಮತದಾನ ಮಾಡಿದರು.

ಚಿತ್ರ ನಟಿ ಹಾಗೂ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್‌ ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು.

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

8 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

9 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

9 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

10 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

10 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

11 hours ago