ಮೈಸೂರು : ಲೋಕಸಭಾ ಚುನಾವಣೆಯ ದಿನವಾದ ಇಂದು ರಾಜ್ಯದ ೧೪ ಕ್ಷೇತ್ರದಲ್ಲಿ ಮೊದಲನೆ ಹಂತದ ಮತದಾನ ನಡೆಯುತ್ತಿದೆ.
ಈ ವೇಳೆ ನಗರದಲ್ಲಿ ವಿವಿಧ ಮಠಾಧೀಶರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಜಿಗಳವರು ಇಂದು ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುತ್ತೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಪ್ರಜಾಪ್ರಭುತ್ವವನ್ನು ಉಳಿಸಿ ಇದು ನಮ್ಮೆಲ್ಲರ ಹಕ್ಕು ಎಂದು ಸಾರ್ವಜನಿಕರಿಗೆ ಸಂದೇಶ ಸಾರಿದರು.
ನಗರದ ಅವದೂತ ದತ್ತಪೀಠದ ಹಿರಿಯ ಪೀಠಾಧಿಪತಿಗಳಾದ ಗಣಪತಿ ಸಚ್ಚಿದಾನಂದಾ ಸ್ವಾಮೀಜಿ ಹಾಗೂ ಬಾಲ ಸ್ವಾಮೀಜಿಗಳಾದ ದತ್ತ ವಿಜಯಾನಾಂದ ತೀರ್ಥ ಸ್ವಾಮೀಜಿಗಳು ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬೂತ್ ನಂಬರ್ 237ರಲ್ಲಿ ತಮ್ಮ ಮತ ಚಲಾಯಿಸಿದರು.
ಮೈಸೂರ್ ನಗರ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಲ್ ನಾಗೇಂದ್ರ ಅವರು ಒಂಬತ್ತು ಗಂಟೆಗೆ ಜಯನಗರದ ಬಾಲೋಧ್ಯಾನ ಇಂಗ್ಲಿಷ್ ಶಾಲೆಯಲ್ಲಿ ತಮ್ಮ ಮತ ಚಲಾಯಿಸುವರು.
ಇನ್ನು ಕೆ.ಅರ್.ಕ್ಷೇತ್ರದ.ಶಾಸಕರಾದ ಟಿ.ಎಸ್.ಶ್ರೀವತ್ಸ ರವರು ಸರತಿ ಸಾಲಿನಲ್ಲಿ ನಿಂತು ಬೆಳ್ಳಗೆ 7.30 ಕ್ಕೆ ವಾರ್ಡ್ ನಂಬರ್ 51 ಬೂತ್ ನಂಬರ್ 139 (ಸಂಸ್ಕೃತ ಪಾಠಶಾಲೆಯಲ್ಲಿ) ಮತದಾನ ಮಾಡಿದರು.
ಚಿತ್ರ ನಟಿ ಹಾಗೂ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ನಗರದ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…