ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದೆ. ಈ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶ್ರೀ ರಕ್ಷೆಯಾಗಲಿದೆ ಎಂದು ಶಾಸಕ ಕೆ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಹೆಬ್ಬಾಳ್ ಲೋಕ ನಾಯಕ ನಗರ ದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಸಾಧನೆಗಳನ್ನು ಕ್ಷೇತ್ರದ ಮತದಾರರಿಗೆ ಮನೆ ಮನೆಗೆ ಹೋಗಿ ತಿಳಿಸುವುದರ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚು ಮತ ನೀಡುವುದರೊಂದಿಗೆ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು
ಇದೇ ಸಂದರ್ಭದಲ್ಲಿ ಭಾಸ್ಕರ್ ಗೌಡ, ಮಾಜಿ ಮಹಾಪೌರರಾದ ಪ್ರಕಾಶ್, ಇಂದ್ರ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಚೇಗೌಡನ ಕೊಪ್ಪಲು ರವಿ, ಮಾಜಿನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಸವರಾಜು, ಸ್ಥಳೀಯ ಮುಖಂಡರಾದ ಕೇಬಲ್ ಮಹೇಶ್, ವಾರ್ಡ್ ಅಧ್ಯಕ್ಷರು ನಾಗರಾಜು, ಮಾಜಿ ಸಿಂಡಿಕೇಟ್ ಸದಸ್ಯರಾದ ಗೋಪಿನಾಥ್, ವಾರ್ಡ್ ಮಹಿಳಾ ಅಧ್ಯಕ್ಷರಾದ ಕಮಲಮ್ಮ, ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…