ಮೈಸೂರು: ಬಿಜೆಪಿ ವಕ್ಫ್ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಇಂದು(ಡಿ.2) ಗುಂಡುರಾವ್ ನಗರಕ್ಕೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ವಕ್ಫ್ ಮಂಡಳಿ ಕ್ಯಾನ್ಸರ್ ರೀತಿಯಿದ್ದಂತೆ. ಈ ಮಂಡಳಿ ರಾಜ್ಯದ ರೈತರ ಜಮೀನು, ಎಸ್ಸಿ, ಎಸ್ಟಿ ಜಮೀನು ಹಾಗೂ ಮಠ-ಮಾನ್ಯಗಳ ಆಸ್ತಿಗಳ ಮೇಲೆ ವಕ್ಫ್ ಬೋರ್ಡ್ ಎಂದು ದಾಖಲಿಸಲು ಹೊರಟಿದೆ. ಈ ಹಿಂದೆ ಉಳುವವನೆ ಭೂಮಿ ಒಡೆಯ ಎಂಬ ಹೇಳಿಕೆಯನ್ನು ನೀಡಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಕಾಂಗ್ರೆಸ್ ಸರ್ಕಾರ ಇಂದಿನ ದಿನಗಳಲ್ಲಿ ಆ ಆಸ್ತಿ ವಕ್ಫ್ ಬೋರ್ಡ್ ಎಂದು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಕ್ಫ್ ಮಂಡಳಿ ಅವರು ಮೈಸೂರು ತಾಲ್ಲೂಕಿನಲ್ಲಿ 44 ಸಾವಿರ ಎಕರೆಗೂ ಅಧಿಕ ಆಸ್ತಿಯನ್ನು ವಕ್ಫ್ ಬೋರ್ಡ್ ಆಸ್ತಿಯೆಂದು ಹೇಳುತ್ತಿದ್ದಾರೆ. ಅಲ್ಲದೇ ಕಸಬಾ ಹೋಬಳಿಯ ಸರ್ವೇ ನಂಬರ್ 153ರಲ್ಲಿ 1.38 ಎಕರೆ ಆಸ್ತಿಯನ್ನು ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಅಭಿವೃದ್ದಿ ಮಾಡಲಾಗಿದೆ . ಆದರೆ ಇದೀಗ ಆ ಜಮೀನಿಗೂ ಸಹ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ.
ಇನ್ನು ಸರ್ವೇ ನಂಬರ್ 168ರಲ್ಲಿ ಬೇಲಿ ಹಾಕಿಕೊಂಡಿದ್ದು, ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ. ಹೀಗಿದ್ದರೂ ಆ ಸ್ಥಳದಲ್ಲಿ ಮಸೀದಿ ನಿರ್ಮಾಣ ಮಾಡಿ ಆಜಾನ್ ಎಂದು ಕೂಗಾಲಾಗುತ್ತಿದೆ. ಈ ವಿಚಾರವಾಗಿ ಗುಂಡುರಾವ್ ನಗರದ ಜನತೆ ಇಂದು ಬೀದಿಗೆ ಬರುವಂತಾಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗನಿಂದ ಇತಂಹ ಸಮಸ್ಯೆಗಳು ಎದುರಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಮೊದಲು ರೈತರನ್ನು ವಕ್ಫ್ ಬೋರ್ಡ್ ಮುಂದೆ ನಿಲ್ಲಿಸುವ ಕೆಲಸವನ್ನು ಬಿಡಬೇಕು. ಮಠ-ಮಾನ್ಯಗಳ ಭೂ ಕಬಳಿಕೆಯನ್ನು ಕೈ ಬಿಡಬೇಕು. ಈ ವಕ್ಫ್ ಬೋರ್ಡ್ ಆಸ್ತಿ ಬದಲಾವಣೆಗೆ ಮುಖ್ಯವಾಗಿ ಜಮೀರ್ ಅಹಮ್ಮದ್ ಕಾರಣವಾಗಿದ್ದಾರೆ. ಅವರಿಂದ ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಹೀಗಾಗಿ ವಕ್ಫ್ ಮಂಡಳಿ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…