ಮೈಸೂರು: ಬಿಜೆಪಿ ವಕ್ಫ್ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಇಂದು(ಡಿ.2) ಗುಂಡುರಾವ್ ನಗರಕ್ಕೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ವಕ್ಫ್ ಮಂಡಳಿ ಕ್ಯಾನ್ಸರ್ ರೀತಿಯಿದ್ದಂತೆ. ಈ ಮಂಡಳಿ ರಾಜ್ಯದ ರೈತರ ಜಮೀನು, ಎಸ್ಸಿ, ಎಸ್ಟಿ ಜಮೀನು ಹಾಗೂ ಮಠ-ಮಾನ್ಯಗಳ ಆಸ್ತಿಗಳ ಮೇಲೆ ವಕ್ಫ್ ಬೋರ್ಡ್ ಎಂದು ದಾಖಲಿಸಲು ಹೊರಟಿದೆ. ಈ ಹಿಂದೆ ಉಳುವವನೆ ಭೂಮಿ ಒಡೆಯ ಎಂಬ ಹೇಳಿಕೆಯನ್ನು ನೀಡಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಕಾಂಗ್ರೆಸ್ ಸರ್ಕಾರ ಇಂದಿನ ದಿನಗಳಲ್ಲಿ ಆ ಆಸ್ತಿ ವಕ್ಫ್ ಬೋರ್ಡ್ ಎಂದು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಕ್ಫ್ ಮಂಡಳಿ ಅವರು ಮೈಸೂರು ತಾಲ್ಲೂಕಿನಲ್ಲಿ 44 ಸಾವಿರ ಎಕರೆಗೂ ಅಧಿಕ ಆಸ್ತಿಯನ್ನು ವಕ್ಫ್ ಬೋರ್ಡ್ ಆಸ್ತಿಯೆಂದು ಹೇಳುತ್ತಿದ್ದಾರೆ. ಅಲ್ಲದೇ ಕಸಬಾ ಹೋಬಳಿಯ ಸರ್ವೇ ನಂಬರ್ 153ರಲ್ಲಿ 1.38 ಎಕರೆ ಆಸ್ತಿಯನ್ನು ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಅಭಿವೃದ್ದಿ ಮಾಡಲಾಗಿದೆ . ಆದರೆ ಇದೀಗ ಆ ಜಮೀನಿಗೂ ಸಹ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ.
ಇನ್ನು ಸರ್ವೇ ನಂಬರ್ 168ರಲ್ಲಿ ಬೇಲಿ ಹಾಕಿಕೊಂಡಿದ್ದು, ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ. ಹೀಗಿದ್ದರೂ ಆ ಸ್ಥಳದಲ್ಲಿ ಮಸೀದಿ ನಿರ್ಮಾಣ ಮಾಡಿ ಆಜಾನ್ ಎಂದು ಕೂಗಾಲಾಗುತ್ತಿದೆ. ಈ ವಿಚಾರವಾಗಿ ಗುಂಡುರಾವ್ ನಗರದ ಜನತೆ ಇಂದು ಬೀದಿಗೆ ಬರುವಂತಾಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗನಿಂದ ಇತಂಹ ಸಮಸ್ಯೆಗಳು ಎದುರಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಮೊದಲು ರೈತರನ್ನು ವಕ್ಫ್ ಬೋರ್ಡ್ ಮುಂದೆ ನಿಲ್ಲಿಸುವ ಕೆಲಸವನ್ನು ಬಿಡಬೇಕು. ಮಠ-ಮಾನ್ಯಗಳ ಭೂ ಕಬಳಿಕೆಯನ್ನು ಕೈ ಬಿಡಬೇಕು. ಈ ವಕ್ಫ್ ಬೋರ್ಡ್ ಆಸ್ತಿ ಬದಲಾವಣೆಗೆ ಮುಖ್ಯವಾಗಿ ಜಮೀರ್ ಅಹಮ್ಮದ್ ಕಾರಣವಾಗಿದ್ದಾರೆ. ಅವರಿಂದ ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಹೀಗಾಗಿ ವಕ್ಫ್ ಮಂಡಳಿ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯತ್ತದೆ ಎಂದು ತಿಳಿಸಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…