prathap simha
ಮೈಸೂರು: ಮತಗಳ್ಳತನ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಗೆದ್ದ ಕಡೆಯಲ್ಲೆಲ್ಲಾ ಮತಗಳ್ಳತನ ಆಗಿಲ್ವಾ ಎಂದು ಪ್ರಶ್ನಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತು ಕಂಗೆಟ್ಟಿರುವ ಕಾಂಗ್ರೆಸ್ ತರಾವರಿ ಆರೋಪ ಮಾಡುತ್ತಿದ್ದು, ಇವಿಎಂ ಹಠಾವೋ ಚಳವಳಿಯನ್ನು ಕಾಂಗ್ರೆಸ್ ಶುರು ಮಾಡಿದೆ. ಆದರೆ, ರಾಹುಲ್ ಗಾಂಧಿ ಮಾಡುವ ಆರೋಪಕ್ಕೆ ಸಾಕ್ಷಿ ಏನಿದೆ? ಎಂದು ಪ್ರಶ್ನಿಸಿದ್ದಾರೆ.
ಅಕ್ರಮ ಎನ್ನುವುದು ಕಾಂಗ್ರೆಸ್ಗೆ ಜನ್ಮತಃ ಬಂದಿದೆ. ಚನ್ನಪಟ್ಟಣ, ಸಂಡೂರು, ರಾಮನಗರ ಉಪ ಚುನಾವಣೆಗಳಲ್ಲಿ ಗೆದ್ದಾಗ ಅದು ನ್ಯಾಯ ಸಮ್ಮತವಾಗಿತ್ತೆ?, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಹುಲ್ ಗಾಂಧಿ ರೀತಿ ಮಾತನಾಡಿದರೆ ಏನೂ ಹೇಳಬೇಕೋ ಕಾಣೆ ಎಂದರು.
ಜನಕ್ಕಿಂತ ಜಾಸ್ತಿ ಮತದಾರರು ಇದ್ದಾರೆ ಎಂದು ಹೇಳುವ ರಾಹುಲ್ ಗಾಂಧಿಯ ಆರೋಪಕ್ಕೆ ಸಾಕ್ಷಿಯೆ ಇಲ್ಲ. ವಿಧಾನಸಭೆಗೆ ಒಂದು ರೀತಿ ಮತ ಹಾಕುತ್ತಾರೆ. ಲೋಕಸಭೆಗೆ ಒಂದು ರೀತಿ ಮತ ಹಾಕುತ್ತಾರೆ. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಸತ್ತವರು ಬಂದು ನನಗೆ ಮತ ಹಾಕಿದ್ದಾರೆ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಚಾಮುಂಡೇಶ್ವರಿ ಉಪ ಚುನಾವಣೆಗೆ ಪೀಟರ್ ಎಂಬ ಚುನಾವಣಾ ವೀಕ್ಷಕನನ್ನು ಹಾಕಿಸಿ ಕೊಂಡು ನೀವು ಹೇಗೆ ಗೆದ್ದಿರಿ ಎಂಬುದು ಗೊತ್ತಿದೆ ಎಂದ ಅವರು, ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿ.ನರಸೀಪುರದಲ್ಲಿ ಘೋಷಿತ ಫಲಿತಾಂಶ ಉಲ್ಟಾ ಮಾಡಿ ಗೆದ್ದರು ಎಂದು ಕಿಡಿಕಾರಿದರು.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮೊದಲು ತನ್ನ ಕ್ಷೇತ್ರದ ಬಗ್ಗೆ ಮಾತಾಡಲಿ, ಪ್ರಿಯಾಂಕ್ ಖರ್ಗೆ ಅಂತೂ ಕಾಲೇಜು ಓದಲಿಲ್ಲ. ತಮ್ಮ ಕ್ಷೇತ್ರದ ಮಕ್ಕಳ ವಿದ್ಯಾಭ್ಯಾಸಕ್ಕಾದರೂ ಕಾಲೇಜು ಕಟ್ಟಿಸಲಿ ಎಂದು ಹೇಳಿದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…