ಮೈಸೂರು: ಇದೇ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್ ಅನ್ನು ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡ ಪರ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇಧ ಮಾಡಬೇಕು. ಕಳಸಾ-ಭಂಡೂರಿ ಮಹದಾಯಿ ಯೋಜನೆ ಕೂಡಲೇ ಆರಂಭಿಸಬೇಕು. ಹಿಂದಿ ಹೇರಿಕೆ ಬೇಡವೇ ಬೇಡ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಮಾರ್ಚ್.22 ರಂದು ಕರ್ನಾಟಕ ಬಂದ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಹಾಗಾಗಿ ಕನ್ನಡಿಗರು ಈ ಬಂದ್ಗೆ ಕೈ ಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದರು.
ಈ ಬಂದ್ ಅನ್ನು ಬೆಳಗಾವಿಯಿಂದ ಚಾಮರಾಜನಗರವರೆಗೂ ಆಚರಿಸಲಾಗುವುದು. ಬೆಳಗಾವಿ ಕನ್ನಡಿಗರ ಕೈಯಲ್ಲಿ ಇಲ್ಲ ಮರಾಠಿಗರ ಕೈಯಲ್ಲಿ ಇದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೇಕಾಗಿಲ್ಲ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಎಂಇಎಸ್ ಇರಬಾರದು, ಬೆಳಗಾವಿ ಉಳಿಸಬೇಕು. ಕಿಡಿಗೇಡಿಗಳು ಬಸ್ ಚಾಲಕರಿಗೆ ಕನ್ನಡದ ಭೂಮಿಯಲ್ಲಿ ಚಾಲಕರಿಗೆ ಹೊಡೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಬಂದ್ ಹಿನ್ನೆಲೆ ಚಾಲಕರು ಯಾವುದೇ ವಾಹನಗಳನ್ನು ಚಾಲನೆ ಮಾಡಬಾರದು. ನಮ್ಮ ರಾಜ್ಯಪಾಲರಾಗಲಿ, ಮುಖ್ಯಮಂತ್ರಿಯಾಗಲಿ ಅಥವಾ ಯಾವುದೇ ಸಚವರಾಗಲಿ ಚಾಲಕರು ಕಾರಿನಲ್ಲಿ ಕುಳಿತುಕೊಳ್ಳಬಾರದೆಂದು ಕನ್ನಡ ಪರ ಸಂಘಟನೆಗಳ ಪರವಾಗಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ಇನ್ನು ಕರ್ನಾಟಕ ಬಂದ್ ಆಚರಣೆ ಮಾಡುವ ಪ್ರಯುಕ್ತ ಕನ್ನಡ ಚಿತ್ರರಂಗ ಸಂಪೂರ್ಣ ಬಂದ್ ಆಗುತ್ತದೆ ಎಂದು ನಂಬಿದ್ದೇನೆ. ಈ ಬಂದ್ಗೆ ಸ್ಯಾಂಡಲ್ವುಡ್ ನಟ ಮತ್ತು ನಟಿಯರು ಆಗಮಿಸಿ ಬೆಂಬಲ ನೀಡಬೇಕು. ಅಲ್ಲದೇ ಪರ ಭಾಷೆ ಚಿತ್ರಗಳನ್ನು ಬಹಿಷ್ಕಾರ ಹಾಕಬೇಕಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮಲಗಿದೆ, ವರ್ಷದಲ್ಲಿ ಮೂರು ದಿನ ಒಬ್ಬಟ್ಟು ಊಟ ಮಾಡಿ ಮಲಗುತ್ತಾರೆ. ಹಾಗಾಗಿ ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…