ಮೈಸೂರು

ಮಾ.22ಕ್ಕೆ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್‌ನ್ನು ಯಶಸ್ವಿ ಮಾಡುತ್ತೇವೆ: ವಾಟಾಳ್‌ ನಾಗರಾಜ್‌

ಮೈಸೂರು: ಇದೇ ಮಾರ್ಚ್‌.22ಕ್ಕೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್‌ ಅನ್ನು ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡ ಪರ ಚಳುವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇಧ ಮಾಡಬೇಕು. ಕಳಸಾ-ಭಂಡೂರಿ ಮಹದಾಯಿ ಯೋಜನೆ ಕೂಡಲೇ ಆರಂಭಿಸಬೇಕು. ಹಿಂದಿ ಹೇರಿಕೆ ಬೇಡವೇ ಬೇಡ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟ‌ರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಮಾರ್ಚ್.22 ರಂದು ಕರ್ನಾಟಕ ಬಂದ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಹಾಗಾಗಿ ಕನ್ನಡಿಗರು ಈ ಬಂದ್‌ಗೆ ಕೈ ಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದರು.

ಈ ಬಂದ್‌ ಅನ್ನು ಬೆಳಗಾವಿಯಿಂದ ಚಾಮರಾಜನಗರವರೆಗೂ ಆಚರಿಸಲಾಗುವುದು. ಬೆಳಗಾವಿ ಕನ್ನಡಿಗರ ಕೈಯಲ್ಲಿ ಇಲ್ಲ ಮರಾಠಿಗರ ಕೈಯಲ್ಲಿ ಇದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೇಕಾಗಿಲ್ಲ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಎಂಇಎಸ್ ಇರಬಾರದು, ಬೆಳಗಾವಿ ಉಳಿಸಬೇಕು. ಕಿಡಿಗೇಡಿಗಳು ಬಸ್ ಚಾಲಕರಿಗೆ ಕನ್ನಡದ ಭೂಮಿಯಲ್ಲಿ ಚಾಲಕರಿಗೆ ಹೊಡೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಂದ್‌ ಹಿನ್ನೆಲೆ ಚಾಲಕರು ಯಾವುದೇ ವಾಹನಗಳನ್ನು ಚಾಲನೆ ಮಾಡಬಾರದು. ನಮ್ಮ ರಾಜ್ಯಪಾಲರಾಗಲಿ, ಮುಖ್ಯಮಂತ್ರಿಯಾಗಲಿ ಅಥವಾ ಯಾವುದೇ ಸಚವರಾಗಲಿ ಚಾಲಕರು ಕಾರಿನಲ್ಲಿ ಕುಳಿತುಕೊಳ್ಳಬಾರದೆಂದು ಕನ್ನಡ ಪರ ಸಂಘಟನೆಗಳ ಪರವಾಗಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಇನ್ನು ಕರ್ನಾಟಕ ಬಂದ್‌ ಆಚರಣೆ ಮಾಡುವ ಪ್ರಯುಕ್ತ ಕನ್ನಡ ಚಿತ್ರರಂಗ ಸಂಪೂರ್ಣ ಬಂದ್ ಆಗುತ್ತದೆ ಎಂದು ನಂಬಿದ್ದೇನೆ. ಈ ಬಂದ್‌ಗೆ ಸ್ಯಾಂಡಲ್‌ವುಡ್‌ ನಟ ಮತ್ತು ನಟಿಯರು ಆಗಮಿಸಿ ಬೆಂಬಲ ನೀಡಬೇಕು. ಅಲ್ಲದೇ ಪರ ಭಾಷೆ ಚಿತ್ರಗಳನ್ನು ಬಹಿಷ್ಕಾರ ಹಾಕಬೇಕಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮಲಗಿದೆ, ವರ್ಷದಲ್ಲಿ ಮೂರು ದಿನ ಒಬ್ಬಟ್ಟು ಊಟ ಮಾಡಿ ಮಲಗುತ್ತಾರೆ. ಹಾಗಾಗಿ ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

36 mins ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

2 hours ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

2 hours ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

2 hours ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

2 hours ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

3 hours ago