ಮೈಸೂರು

ಮಾ.22ಕ್ಕೆ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್‌ನ್ನು ಯಶಸ್ವಿ ಮಾಡುತ್ತೇವೆ: ವಾಟಾಳ್‌ ನಾಗರಾಜ್‌

ಮೈಸೂರು: ಇದೇ ಮಾರ್ಚ್‌.22ಕ್ಕೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್‌ ಅನ್ನು ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡ ಪರ ಚಳುವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇಧ ಮಾಡಬೇಕು. ಕಳಸಾ-ಭಂಡೂರಿ ಮಹದಾಯಿ ಯೋಜನೆ ಕೂಡಲೇ ಆರಂಭಿಸಬೇಕು. ಹಿಂದಿ ಹೇರಿಕೆ ಬೇಡವೇ ಬೇಡ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟ‌ರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಮಾರ್ಚ್.22 ರಂದು ಕರ್ನಾಟಕ ಬಂದ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಹಾಗಾಗಿ ಕನ್ನಡಿಗರು ಈ ಬಂದ್‌ಗೆ ಕೈ ಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದರು.

ಈ ಬಂದ್‌ ಅನ್ನು ಬೆಳಗಾವಿಯಿಂದ ಚಾಮರಾಜನಗರವರೆಗೂ ಆಚರಿಸಲಾಗುವುದು. ಬೆಳಗಾವಿ ಕನ್ನಡಿಗರ ಕೈಯಲ್ಲಿ ಇಲ್ಲ ಮರಾಠಿಗರ ಕೈಯಲ್ಲಿ ಇದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೇಕಾಗಿಲ್ಲ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಎಂಇಎಸ್ ಇರಬಾರದು, ಬೆಳಗಾವಿ ಉಳಿಸಬೇಕು. ಕಿಡಿಗೇಡಿಗಳು ಬಸ್ ಚಾಲಕರಿಗೆ ಕನ್ನಡದ ಭೂಮಿಯಲ್ಲಿ ಚಾಲಕರಿಗೆ ಹೊಡೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಂದ್‌ ಹಿನ್ನೆಲೆ ಚಾಲಕರು ಯಾವುದೇ ವಾಹನಗಳನ್ನು ಚಾಲನೆ ಮಾಡಬಾರದು. ನಮ್ಮ ರಾಜ್ಯಪಾಲರಾಗಲಿ, ಮುಖ್ಯಮಂತ್ರಿಯಾಗಲಿ ಅಥವಾ ಯಾವುದೇ ಸಚವರಾಗಲಿ ಚಾಲಕರು ಕಾರಿನಲ್ಲಿ ಕುಳಿತುಕೊಳ್ಳಬಾರದೆಂದು ಕನ್ನಡ ಪರ ಸಂಘಟನೆಗಳ ಪರವಾಗಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಇನ್ನು ಕರ್ನಾಟಕ ಬಂದ್‌ ಆಚರಣೆ ಮಾಡುವ ಪ್ರಯುಕ್ತ ಕನ್ನಡ ಚಿತ್ರರಂಗ ಸಂಪೂರ್ಣ ಬಂದ್ ಆಗುತ್ತದೆ ಎಂದು ನಂಬಿದ್ದೇನೆ. ಈ ಬಂದ್‌ಗೆ ಸ್ಯಾಂಡಲ್‌ವುಡ್‌ ನಟ ಮತ್ತು ನಟಿಯರು ಆಗಮಿಸಿ ಬೆಂಬಲ ನೀಡಬೇಕು. ಅಲ್ಲದೇ ಪರ ಭಾಷೆ ಚಿತ್ರಗಳನ್ನು ಬಹಿಷ್ಕಾರ ಹಾಕಬೇಕಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮಲಗಿದೆ, ವರ್ಷದಲ್ಲಿ ಮೂರು ದಿನ ಒಬ್ಬಟ್ಟು ಊಟ ಮಾಡಿ ಮಲಗುತ್ತಾರೆ. ಹಾಗಾಗಿ ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago