ಮೈಸೂರು

ದಸರಾ ಚಲನಚಿತ್ರೋತ್ಸವದ ಕಿರು ಚಿತ್ರಗಳ ವೀಕ್ಷಣೆ

ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು.

ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು ಎಲ್ಲಾ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನ ರೀತಿಯ ಕಥಾವಸ್ತುವನ್ನು ಹೊಂದಿದೆ. ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಗೊಂಡ ಚಿತ್ರಗಳನ್ನು ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡಲಾಗುವುದು.

ಕಿರುಚಿತ್ರ ಸ್ಪರ್ಧೆಯ ಕಿರು ಚಿತ್ರಗಳ ಆಯ್ಕೆಯ ತೀರ್ಪುಗಾರರಾಗಿ ಶಿವಮೊಗ್ಗ ಶ್ರೀಮತಿ ಇಂದಿರಾಗಾಂಧಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ನರೇಂದ್ರ ಕುಳಗಟ್ಟೆ, ಜಯಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಚರಿತ, ಮೈಸೂರು ವಿಶ್ವವಿದ್ಯಾನಿಲಯದ ಇಎಂಆರ್‌ಸಿ ತಂತ್ರಜ್ಞರಾದ ಗೋಪಿನಾಥ್, ಬೆಂಗಳೂರಿನ ಸೌಂಡ್ ಇಂಜಿನಿಯರ್ ಅನಿಲ್ ಕುಮಾರ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವದ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಹುಣಸೂರು ಉಪ ವಿಭಾಗಾಧಿಕಾರಿಗಳಾದ ವಿಜಯಕುಮಾರ್, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರಾದ ಶೋಭಾ.ಕೆ ಹಾಗೂ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಚಲನಚಿತ್ರೋತ್ಸವ ಸಹ ಸಯೋಜಕರಾದ ಶ್ರೇಯಸ್ ಉಪಸ್ಥಿತರಿದ್ದರು.

ಆಯ್ಕೆಗೊಂಡ ಕಿರುಚಿತ್ರಗಳು

1. ಹಿಂಬಾಲಿಸಿ
2.ಆ ಕ್ಷಣ
3.ಅದೃಷ್ಟ ಲಕ್ಷ್ಮೀ
4. ಮಾರ್ವೆನ್
5.ನನ್ನ ಪ್ರಪಂಚ
6.ಹಬ್ಬದ ಹಸಿವು
7.ಕಾಲಾಂತರ
8.ಎರ್ಡ್ರೂಪಾಯಿ
9.ಲಕುಮಿ
10.ಸೆಕ್ಸ್ ಟಾಯ್

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago