ಮೈಸೂರು

ದಸರಾ ಚಲನಚಿತ್ರೋತ್ಸವದ ಕಿರು ಚಿತ್ರಗಳ ವೀಕ್ಷಣೆ

ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು.

ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು ಎಲ್ಲಾ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನ ರೀತಿಯ ಕಥಾವಸ್ತುವನ್ನು ಹೊಂದಿದೆ. ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಗೊಂಡ ಚಿತ್ರಗಳನ್ನು ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡಲಾಗುವುದು.

ಕಿರುಚಿತ್ರ ಸ್ಪರ್ಧೆಯ ಕಿರು ಚಿತ್ರಗಳ ಆಯ್ಕೆಯ ತೀರ್ಪುಗಾರರಾಗಿ ಶಿವಮೊಗ್ಗ ಶ್ರೀಮತಿ ಇಂದಿರಾಗಾಂಧಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ನರೇಂದ್ರ ಕುಳಗಟ್ಟೆ, ಜಯಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಚರಿತ, ಮೈಸೂರು ವಿಶ್ವವಿದ್ಯಾನಿಲಯದ ಇಎಂಆರ್‌ಸಿ ತಂತ್ರಜ್ಞರಾದ ಗೋಪಿನಾಥ್, ಬೆಂಗಳೂರಿನ ಸೌಂಡ್ ಇಂಜಿನಿಯರ್ ಅನಿಲ್ ಕುಮಾರ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವದ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಹುಣಸೂರು ಉಪ ವಿಭಾಗಾಧಿಕಾರಿಗಳಾದ ವಿಜಯಕುಮಾರ್, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರಾದ ಶೋಭಾ.ಕೆ ಹಾಗೂ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಚಲನಚಿತ್ರೋತ್ಸವ ಸಹ ಸಯೋಜಕರಾದ ಶ್ರೇಯಸ್ ಉಪಸ್ಥಿತರಿದ್ದರು.

ಆಯ್ಕೆಗೊಂಡ ಕಿರುಚಿತ್ರಗಳು

1. ಹಿಂಬಾಲಿಸಿ
2.ಆ ಕ್ಷಣ
3.ಅದೃಷ್ಟ ಲಕ್ಷ್ಮೀ
4. ಮಾರ್ವೆನ್
5.ನನ್ನ ಪ್ರಪಂಚ
6.ಹಬ್ಬದ ಹಸಿವು
7.ಕಾಲಾಂತರ
8.ಎರ್ಡ್ರೂಪಾಯಿ
9.ಲಕುಮಿ
10.ಸೆಕ್ಸ್ ಟಾಯ್

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

12 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago