ಮೈಸೂರು

ದಸರಾ ಚಲನಚಿತ್ರೋತ್ಸವದ ಕಿರು ಚಿತ್ರಗಳ ವೀಕ್ಷಣೆ

ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು.

ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು ಎಲ್ಲಾ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನ ರೀತಿಯ ಕಥಾವಸ್ತುವನ್ನು ಹೊಂದಿದೆ. ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಗೊಂಡ ಚಿತ್ರಗಳನ್ನು ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡಲಾಗುವುದು.

ಕಿರುಚಿತ್ರ ಸ್ಪರ್ಧೆಯ ಕಿರು ಚಿತ್ರಗಳ ಆಯ್ಕೆಯ ತೀರ್ಪುಗಾರರಾಗಿ ಶಿವಮೊಗ್ಗ ಶ್ರೀಮತಿ ಇಂದಿರಾಗಾಂಧಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ನರೇಂದ್ರ ಕುಳಗಟ್ಟೆ, ಜಯಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಚರಿತ, ಮೈಸೂರು ವಿಶ್ವವಿದ್ಯಾನಿಲಯದ ಇಎಂಆರ್‌ಸಿ ತಂತ್ರಜ್ಞರಾದ ಗೋಪಿನಾಥ್, ಬೆಂಗಳೂರಿನ ಸೌಂಡ್ ಇಂಜಿನಿಯರ್ ಅನಿಲ್ ಕುಮಾರ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವದ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಹುಣಸೂರು ಉಪ ವಿಭಾಗಾಧಿಕಾರಿಗಳಾದ ವಿಜಯಕುಮಾರ್, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರಾದ ಶೋಭಾ.ಕೆ ಹಾಗೂ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಚಲನಚಿತ್ರೋತ್ಸವ ಸಹ ಸಯೋಜಕರಾದ ಶ್ರೇಯಸ್ ಉಪಸ್ಥಿತರಿದ್ದರು.

ಆಯ್ಕೆಗೊಂಡ ಕಿರುಚಿತ್ರಗಳು

1. ಹಿಂಬಾಲಿಸಿ
2.ಆ ಕ್ಷಣ
3.ಅದೃಷ್ಟ ಲಕ್ಷ್ಮೀ
4. ಮಾರ್ವೆನ್
5.ನನ್ನ ಪ್ರಪಂಚ
6.ಹಬ್ಬದ ಹಸಿವು
7.ಕಾಲಾಂತರ
8.ಎರ್ಡ್ರೂಪಾಯಿ
9.ಲಕುಮಿ
10.ಸೆಕ್ಸ್ ಟಾಯ್

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

1 hour ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago