ಮೈಸೂರು: ಕಲುಷಿತ ನೀರು ಸೇವಿಸಿ ಸಾಲುಂಡಿ ಗ್ರಾಮದ ಯುವಕನೋರ್ವ ಮೃತನಾದ ಘಟನೆಗೆ ಸಂಬಂಧಿಸಿದಂತೆ ಮೂಡಾ ಇಂಜಿನಿಯರ್ ನ್ನು ಅಮಾನತು ಮಾಡುವಂತೆ ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಿಗೆ ನೇರವಾಗಿ ಕರೆ ಮಾಡಿದ ಶಾಸಕ ಜಿಟಿಡಿ, ಮುಡಾ ಇಂಜಿನಿಯರ್ ಕೆ.ಟಿ ರವಿ ಅವರನ್ನು ಅಮಾನತು ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
ಕಳೆದ ಮೂರು ವರ್ಷಗಳಿಂದ ನಾನು ಹೇಳುತ್ತಲೇ ಇದ್ದೇನೆ. ಸಮರ್ಪಕ ಕುಡಿಯುವ ನೀರಿನ ಪೂರೈಕೆಯಿಲ್ಲ. ಕುಡಿಯುವ ನೀರಿಗೆ ಟ್ಯಾಂಕ್ ಮಾಡಿಲ್ಲ. ಸರ್ಕಾರ ಸೆಪ್ಟಿಕ್ ಟ್ಯಾಂಕ್ ಮಾಡಿದೆ. ಅದಕ್ಕೆ ಪೈಪ್ ಲೈನ್ ಲಿಂಗ್ ಮಾಡಿಲ್ಲ ಎಂದು, ಆದರೆ ರಿಯಲ್ ಎಸ್ಟೇಟ್ ಮಾಡಿಕೊಂಡು ಸೈಟ್ ಮಾರುತ್ತಿದ್ದಾನೆ. ಕೆ.ಟಿ ರವಿ ಅವರನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.
ಈ ದುರಂತಕ್ಕೆ ಮೂಡಾ ಅಧಿಕಾರಿಗಳೇ ನೇರ ಕಾರಣ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮೃತಪಟ್ಟರೇ, 48 ಜನರು ಅಸ್ವಸ್ಥರಾಗಿದ್ದಾರೆ. ದೇವರ ದಯೆಯಿಂದ ದೊಡ್ಡ ಅನಾಹುತವಾಗಿಲ್ಲ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಾಲುಂಡಿ ಗ್ರಾಮದಲ್ಲಿ ಮೊದಲು ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸುವ ಪೈಪ್ಲೈನ್ ದುರಸ್ಥಿ ಕಾರ್ಯ ಮೊದಲು ಆಗಬೇಕು. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬರುವ ಸಂಭವವಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಜಿಟಿ ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…