ಮೈಸೂರು: ಕಲುಷಿತ ನೀರು ಸೇವಿಸಿ ಸಾಲುಂಡಿ ಗ್ರಾಮದ ಯುವಕನೋರ್ವ ಮೃತನಾದ ಘಟನೆಗೆ ಸಂಬಂಧಿಸಿದಂತೆ ಮೂಡಾ ಇಂಜಿನಿಯರ್ ನ್ನು ಅಮಾನತು ಮಾಡುವಂತೆ ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಿಗೆ ನೇರವಾಗಿ ಕರೆ ಮಾಡಿದ ಶಾಸಕ ಜಿಟಿಡಿ, ಮುಡಾ ಇಂಜಿನಿಯರ್ ಕೆ.ಟಿ ರವಿ ಅವರನ್ನು ಅಮಾನತು ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
ಕಳೆದ ಮೂರು ವರ್ಷಗಳಿಂದ ನಾನು ಹೇಳುತ್ತಲೇ ಇದ್ದೇನೆ. ಸಮರ್ಪಕ ಕುಡಿಯುವ ನೀರಿನ ಪೂರೈಕೆಯಿಲ್ಲ. ಕುಡಿಯುವ ನೀರಿಗೆ ಟ್ಯಾಂಕ್ ಮಾಡಿಲ್ಲ. ಸರ್ಕಾರ ಸೆಪ್ಟಿಕ್ ಟ್ಯಾಂಕ್ ಮಾಡಿದೆ. ಅದಕ್ಕೆ ಪೈಪ್ ಲೈನ್ ಲಿಂಗ್ ಮಾಡಿಲ್ಲ ಎಂದು, ಆದರೆ ರಿಯಲ್ ಎಸ್ಟೇಟ್ ಮಾಡಿಕೊಂಡು ಸೈಟ್ ಮಾರುತ್ತಿದ್ದಾನೆ. ಕೆ.ಟಿ ರವಿ ಅವರನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.
ಈ ದುರಂತಕ್ಕೆ ಮೂಡಾ ಅಧಿಕಾರಿಗಳೇ ನೇರ ಕಾರಣ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮೃತಪಟ್ಟರೇ, 48 ಜನರು ಅಸ್ವಸ್ಥರಾಗಿದ್ದಾರೆ. ದೇವರ ದಯೆಯಿಂದ ದೊಡ್ಡ ಅನಾಹುತವಾಗಿಲ್ಲ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಾಲುಂಡಿ ಗ್ರಾಮದಲ್ಲಿ ಮೊದಲು ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸುವ ಪೈಪ್ಲೈನ್ ದುರಸ್ಥಿ ಕಾರ್ಯ ಮೊದಲು ಆಗಬೇಕು. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬರುವ ಸಂಭವವಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಜಿಟಿ ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…