ಮೈಸೂರು

ಕುಕ್ಕರಹಳ್ಳಿ ಕೆರೆ ಏರಿಯಲ್ಲಿ ನೀರು ಸೋರಿಕೆ; ತಜ್ಞರ ತಂಡದಿಂದ ಮಣ್ಣು ಪರೀಕ್ಷೆ

ಮೈಸೂರು: ಕುಕ್ಕರಹಳ್ಳಿ ಕೆರೆಗೆ ಏರಿಯಲ್ಲಿ ಕಾಣಿಸಿಕೊಂಡಿರುವ ನೀರು ಸೋರಿಕೆಯಿಂದ ಕೆರೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ (ಕೆಇಆರ್‌ಎಸ್) ತಂಡ ಇಲ್ಲಿನ ಮಣ್ಣಿನ ಪರೀಕ್ಷೆ ಮಾಡಿ 10 ದಿನಗಳಲ್ಲಿ ವರದಿ ನೀಡುವುದಾಗಿ ತಿಳಿಸಿದೆ.

ಕೆಇಆರ್‌ಎಸ್‌ನ ನಿರ್ದೇಶಕ ಡಾ.ಮಹೇಶ್ ಅವರ ನೇತೃತ್ವದಲ್ಲಿ ಇಂಜಿನಿಯರ್‌ಗಳಾದ ಗೋವಿಂದರಾಜು, ಸತ್ಯ ನಾರಾಯಣ ಸೇರಿದಂತೆ 9 ಇಂಜಿನಿಯರ್ ತಜ್ಞರ ತಂಡ ಶನಿವಾರ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸಂಪೂರ್ಣ ಕೆರೆಯ ಏರಿಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿರುವ ತಂಡ ಕೆರೆಗೆ ಯಾವುದೇ ಅಪಾಯವಿಲ್ಲ. ಕೆರೆಯ ಬಂಡ್‌ಗಳಲ್ಲಿ ಯಾವುದೇ ಕ್ಯ್ರಾಕ್ಸ್ ಇಲ್ಲ. ಒಂದೆರಡು ಕಡೆ ಮಾತ್ರ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಬಂಡ್‌ಗಳು ಜಿನುಗಿದೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಕೆರೆಗೆ ನೀರು ಪ್ರವೇಶವಾಗುವ ಜಾಗ ಮತ್ತು ಹೊರ ಹೋಗುವ ಜಾಗವನ್ನು ತಂಡ ಪರಿಶೀಲಿಸಿದ್ದು, ಕಳೆದ ಹತ್ತು ದಿನಗಳಿಂದ ಕೆರೆಗೆ ಅಪಾಯವಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದ ಆತಂಕ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರು ವಿವಿ, ತಜ್ಞರ ತಂಡದ ಮೂಲಕವೇ ಪರಿಶೀಲನೆಗೆ ನಿರ್ಧರಿಸಿತ್ತು.

ಸಾಮಾನ್ಯವಾಗಿ ಹೆಚ್ಚು ಮಳೆ ಬಂದ ಸಂದರ್ಭದಲ್ಲಿ ಕೆರೆಗೆ ಹೆಚ್ಚು ನೀರು ಹರಿದು ಬಂದು, ಇಲಿ, ಹೆಗ್ಗಣಗಳು ಸೃಷ್ಟಿಸಿದ ಬಿಲಗಳ ಮೂಲಕ ನೀರು ಸೋರಿಕೆಯಾಗುತ್ತವೆ. ಮರಗಳು ಉರುಳಿಬಿದ್ದು, ಬೇರುಗಳು ಒಣಗಿದ ಸಂದರ್ಭದಲ್ಲಿ ನೀರು ಹರಿಯುತ್ತದೆ. ಆದರೆ, ಕೆರೆಯ ಆವರಣದಲ್ಲಿ ಯಾವುದೇ ಮರಗಳನ್ನು ಕಡಿದಿಲ್ಲ. ಹೀಗಾಗಿ, ಅಪಾಯದ ಸಾಧ್ಯತೆಯೂ ಕಡಿಮೆ ಮುಂದಿನ 10 ದಿನಗಳ ಒಳಗಾಗಿ ವಿಸ್ಕೃತ ವರದಿಯನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಜ್ಞರ ತಂಡದ ಸದಸ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ತಂಡವು ಕೆರೆಯ ಏರಿ ಕೆಳಭಾಗ, ಮೇಲ್ಭಾಗ ಮತ್ತು ಮಧ್ಯಭಾಗದಲ್ಲಿ ಮಣ್ಣು ಪಡೆದು, ಅದರ ಗಟ್ಟಿತನ, ಗುಣಮಟ್ಟ ಪರಿಶೀಲಿಸಿದ್ದಾರೆ. ಮಳೆಯಾದ ಸಂದರ್ಭದಲ್ಲಿ ಹೆಚ್ಚು ನೀರು ಹರಿದು ಬಂದ ಸಂದರ್ಭದಲ್ಲಿ ಏರಿಯಲ್ಲಿ ನೀರು ಸೋರಿಕೆಯಾಗುವುದು ಸಾಮಾನ್ಯ. ಕೆರೆಯ ದಕ್ಷಿಣ ಭಾಗದ ಉದ್ದಕ್ಕೂ ತೆರಳಿದ ವೇಳೆ ಏರಿಯಲ್ಲಿ ಯಾವುದೇ ಬಿರುಕು ಕಂಡುಬಂದಿಲ್ಲ. ಯಾವುದೇ ಆತಂಕ ಬೇಡ ಎಂದು ತಜ್ಞರ ತಂಡ ತಿಳಿಸಿದೆ ಎಂದು ಪರಿಸರ ಸಂರಕ್ಷಕ ಪ್ರೊ.ಕೆ.ಎಂ.ಜಯರಾಮಯ್ಯ ತಿಳಿಸಿದ್ದಾರೆ.

andolana

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

4 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

5 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

7 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

7 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

8 hours ago