ಮೈಸೂರು

ಕುಕ್ಕರಹಳ್ಳಿ ಕೆರೆ ಏರಿಯಲ್ಲಿ ನೀರು ಸೋರಿಕೆ; ತಜ್ಞರ ತಂಡದಿಂದ ಮಣ್ಣು ಪರೀಕ್ಷೆ

ಮೈಸೂರು: ಕುಕ್ಕರಹಳ್ಳಿ ಕೆರೆಗೆ ಏರಿಯಲ್ಲಿ ಕಾಣಿಸಿಕೊಂಡಿರುವ ನೀರು ಸೋರಿಕೆಯಿಂದ ಕೆರೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ (ಕೆಇಆರ್‌ಎಸ್) ತಂಡ ಇಲ್ಲಿನ ಮಣ್ಣಿನ ಪರೀಕ್ಷೆ ಮಾಡಿ 10 ದಿನಗಳಲ್ಲಿ ವರದಿ ನೀಡುವುದಾಗಿ ತಿಳಿಸಿದೆ.

ಕೆಇಆರ್‌ಎಸ್‌ನ ನಿರ್ದೇಶಕ ಡಾ.ಮಹೇಶ್ ಅವರ ನೇತೃತ್ವದಲ್ಲಿ ಇಂಜಿನಿಯರ್‌ಗಳಾದ ಗೋವಿಂದರಾಜು, ಸತ್ಯ ನಾರಾಯಣ ಸೇರಿದಂತೆ 9 ಇಂಜಿನಿಯರ್ ತಜ್ಞರ ತಂಡ ಶನಿವಾರ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸಂಪೂರ್ಣ ಕೆರೆಯ ಏರಿಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿರುವ ತಂಡ ಕೆರೆಗೆ ಯಾವುದೇ ಅಪಾಯವಿಲ್ಲ. ಕೆರೆಯ ಬಂಡ್‌ಗಳಲ್ಲಿ ಯಾವುದೇ ಕ್ಯ್ರಾಕ್ಸ್ ಇಲ್ಲ. ಒಂದೆರಡು ಕಡೆ ಮಾತ್ರ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಬಂಡ್‌ಗಳು ಜಿನುಗಿದೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಕೆರೆಗೆ ನೀರು ಪ್ರವೇಶವಾಗುವ ಜಾಗ ಮತ್ತು ಹೊರ ಹೋಗುವ ಜಾಗವನ್ನು ತಂಡ ಪರಿಶೀಲಿಸಿದ್ದು, ಕಳೆದ ಹತ್ತು ದಿನಗಳಿಂದ ಕೆರೆಗೆ ಅಪಾಯವಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದ ಆತಂಕ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರು ವಿವಿ, ತಜ್ಞರ ತಂಡದ ಮೂಲಕವೇ ಪರಿಶೀಲನೆಗೆ ನಿರ್ಧರಿಸಿತ್ತು.

ಸಾಮಾನ್ಯವಾಗಿ ಹೆಚ್ಚು ಮಳೆ ಬಂದ ಸಂದರ್ಭದಲ್ಲಿ ಕೆರೆಗೆ ಹೆಚ್ಚು ನೀರು ಹರಿದು ಬಂದು, ಇಲಿ, ಹೆಗ್ಗಣಗಳು ಸೃಷ್ಟಿಸಿದ ಬಿಲಗಳ ಮೂಲಕ ನೀರು ಸೋರಿಕೆಯಾಗುತ್ತವೆ. ಮರಗಳು ಉರುಳಿಬಿದ್ದು, ಬೇರುಗಳು ಒಣಗಿದ ಸಂದರ್ಭದಲ್ಲಿ ನೀರು ಹರಿಯುತ್ತದೆ. ಆದರೆ, ಕೆರೆಯ ಆವರಣದಲ್ಲಿ ಯಾವುದೇ ಮರಗಳನ್ನು ಕಡಿದಿಲ್ಲ. ಹೀಗಾಗಿ, ಅಪಾಯದ ಸಾಧ್ಯತೆಯೂ ಕಡಿಮೆ ಮುಂದಿನ 10 ದಿನಗಳ ಒಳಗಾಗಿ ವಿಸ್ಕೃತ ವರದಿಯನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಜ್ಞರ ತಂಡದ ಸದಸ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ತಂಡವು ಕೆರೆಯ ಏರಿ ಕೆಳಭಾಗ, ಮೇಲ್ಭಾಗ ಮತ್ತು ಮಧ್ಯಭಾಗದಲ್ಲಿ ಮಣ್ಣು ಪಡೆದು, ಅದರ ಗಟ್ಟಿತನ, ಗುಣಮಟ್ಟ ಪರಿಶೀಲಿಸಿದ್ದಾರೆ. ಮಳೆಯಾದ ಸಂದರ್ಭದಲ್ಲಿ ಹೆಚ್ಚು ನೀರು ಹರಿದು ಬಂದ ಸಂದರ್ಭದಲ್ಲಿ ಏರಿಯಲ್ಲಿ ನೀರು ಸೋರಿಕೆಯಾಗುವುದು ಸಾಮಾನ್ಯ. ಕೆರೆಯ ದಕ್ಷಿಣ ಭಾಗದ ಉದ್ದಕ್ಕೂ ತೆರಳಿದ ವೇಳೆ ಏರಿಯಲ್ಲಿ ಯಾವುದೇ ಬಿರುಕು ಕಂಡುಬಂದಿಲ್ಲ. ಯಾವುದೇ ಆತಂಕ ಬೇಡ ಎಂದು ತಜ್ಞರ ತಂಡ ತಿಳಿಸಿದೆ ಎಂದು ಪರಿಸರ ಸಂರಕ್ಷಕ ಪ್ರೊ.ಕೆ.ಎಂ.ಜಯರಾಮಯ್ಯ ತಿಳಿಸಿದ್ದಾರೆ.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

6 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

6 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

6 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

7 hours ago