ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ ಹೆಚ್ಚುತ್ತಲೇ ಇದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಭಾರತೀಯ ಸೇನೆಯು ತಾತ್ಕಲಿಕ ಸೇತುವೆಯ ಮೂಲಕ ಸುಮಾರು 1000 ಗಾಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಕೇರಳಕ್ಕೆ ಅಗತ್ಯ ನೆರವು ಘೋಷಿಸಿರುವ ಸಿಎಂ ಸಿದ್ದರಾಮಯ್ಯ, ದುರಂತದ ರಕ್ಷಣೆಗೆ ಅಧಿಕಾರಿಗಳ ಜೊತೆ ಸಚಿವ ಸಂತೋಷ್ ಲಾಡ್ರನ್ನು ನೇಮಿಸಿದ್ದಾರೆ.
ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಕೇರಳದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎರಡು ಕೊಠಡಿ ಮೀಸಲು ಇಡಲಾಗಿದೆ.
ಕೆಆರ್ ಆಸ್ಪತ್ರೆಯಲಿ ಒಟ್ಟು 15 ಬೆಡ್ಗಳನ್ನು ಕಾಯ್ದಿರಿಸಿದ್ದು, ಅಗತ್ಯವಾದ ಔಷಧಿಗಳು, ಎರಡಡು ಆಕ್ಸಿಜನ್ ಸಿಲಿಂಡರ್, ದಿನದ 24 ಗಂಟೆಯು ಒಬ್ಬ ತಜ್ಞ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದೇವೆ. ತುರ್ತು ಚಿಕಿತ್ಸಾ ಘಟಕದಲ್ಲಿ ಮೂರು ಬೆಡ್ಗಳು ಇವೆ. ಮೊದಲು ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಅವಶ್ಯ ಬಿದ್ದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಕೆಆರ್ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಮೆಡಿಕಲ್ ಕಾಲೇಜು ಡೀನ್ ದ್ರಾಕ್ಷಾಯಿಣಿ ತಿಳಿಸಿದ್ದಾರೆ.
ಕೆ.ಎಸ್.ಚಂದ್ರಶೇಖರ್ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…