ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ನಾನು(ಯದುವೀರ್) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ನನಗೆ ನಿಮ್ಮ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಬಲಪಡಿಸಿ ದೇಶದ ವಿಕಸಿತ ಸಂಕಲ್ಪಕ್ಕೆ ನಿಮ್ಮ ಕೊಡುಗೆ ನೀಡಿ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳು ಹಿಂದುಳಿದವರು, ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅಂದಿನ ಮೈಸೂರು ಒಡೆಯರು ಅವರು ಬ್ರಾಂಡ್ ಮೈಸೂರು ಯೋಜನೆ ಮೂಲಕ, ಮೈಸೂರು ಕಾರ್ಖನೆ, ಮೈಸೂರು ಸಿಮೆಂಟ್, ಮೈಸೂರು ಸ್ಯಾಂಡಲ್ ಸೋಪ್ ಹೀಗೆ ಹತ್ತು ಹಲವು ಯೋಜನೆಗಳಿದ್ದವು. ಇದೇ ರೀತಿ ಮೋದಿಯವರು ಮೇಕ್ ಇನ್ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳಿಗೆ ಒತ್ತು ನೀಡಿ ಭಾರತೀಯರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪ್ರಾಚೀನ ಭಾರತದ ಕುರುಹುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ. ಮೈಸೂರು ಪರಂಪರೆ ಉಳಿಯಬೇಕು. ಅರಮನೆಯ ಸಾಂಸ್ಕೃತಿಕ ಕುರುಹುಗಳು ಉಳಿಸಿಕೊಂಡು ಬಂದಿದ್ದೇವೆ. ಇದಕ್ಕೆ ಕೇಂದ್ರದ ಯೋಜನೆಗಳು ಪೂರಕವಾಗಿವೆ ಎಂದರು.
ಅರಮನೆಯ ರಾಜವಂಶಸ್ಥ ಪಟ್ಟ ವಹಿಸಿಕೊಂಡ ಬಳಿಕ ಮೈಸೂರು ಭಾಗದ ಜನರು ನನ್ನನ್ನು ಮನೆ ಮಗನ ರೀತಿ ನೋಡಿಕೊಂಡಿದ್ದೀರಿ. ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸುತ್ತೇನೆ. ನನಗೆ ಮತ ನೀಡಿ ಎಂದು ಮನವಿ ಮಾಡಿದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…