ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ನಾನು(ಯದುವೀರ್) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ನನಗೆ ನಿಮ್ಮ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಬಲಪಡಿಸಿ ದೇಶದ ವಿಕಸಿತ ಸಂಕಲ್ಪಕ್ಕೆ ನಿಮ್ಮ ಕೊಡುಗೆ ನೀಡಿ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳು ಹಿಂದುಳಿದವರು, ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅಂದಿನ ಮೈಸೂರು ಒಡೆಯರು ಅವರು ಬ್ರಾಂಡ್ ಮೈಸೂರು ಯೋಜನೆ ಮೂಲಕ, ಮೈಸೂರು ಕಾರ್ಖನೆ, ಮೈಸೂರು ಸಿಮೆಂಟ್, ಮೈಸೂರು ಸ್ಯಾಂಡಲ್ ಸೋಪ್ ಹೀಗೆ ಹತ್ತು ಹಲವು ಯೋಜನೆಗಳಿದ್ದವು. ಇದೇ ರೀತಿ ಮೋದಿಯವರು ಮೇಕ್ ಇನ್ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳಿಗೆ ಒತ್ತು ನೀಡಿ ಭಾರತೀಯರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪ್ರಾಚೀನ ಭಾರತದ ಕುರುಹುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ. ಮೈಸೂರು ಪರಂಪರೆ ಉಳಿಯಬೇಕು. ಅರಮನೆಯ ಸಾಂಸ್ಕೃತಿಕ ಕುರುಹುಗಳು ಉಳಿಸಿಕೊಂಡು ಬಂದಿದ್ದೇವೆ. ಇದಕ್ಕೆ ಕೇಂದ್ರದ ಯೋಜನೆಗಳು ಪೂರಕವಾಗಿವೆ ಎಂದರು.
ಅರಮನೆಯ ರಾಜವಂಶಸ್ಥ ಪಟ್ಟ ವಹಿಸಿಕೊಂಡ ಬಳಿಕ ಮೈಸೂರು ಭಾಗದ ಜನರು ನನ್ನನ್ನು ಮನೆ ಮಗನ ರೀತಿ ನೋಡಿಕೊಂಡಿದ್ದೀರಿ. ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸುತ್ತೇನೆ. ನನಗೆ ಮತ ನೀಡಿ ಎಂದು ಮನವಿ ಮಾಡಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…