ಮೈಸೂರು

ಮೋದಿಯೊಂದಿಗೆ ಸೇರಿ ಭಾರತ ಮಾತೆಯ ತೇರನ್ನು ಎಳೆಯೋಣ: ಯದುವೀರ್‌

ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ನಾನು(ಯದುವೀರ್) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ನನಗೆ ನಿಮ್ಮ ಮತ ನೀಡುವ ಮೂಲಕ‌ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಬಲಪಡಿಸಿ ದೇಶದ ವಿಕಸಿತ ಸಂಕಲ್ಪಕ್ಕೆ ನಿಮ್ಮ ಕೊಡುಗೆ ನೀಡಿ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳು ಹಿಂದುಳಿದವರು, ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅಂದಿನ ಮೈಸೂರು ಒಡೆಯರು ಅವರು ಬ್ರಾಂಡ್‌ ಮೈಸೂರು ಯೋಜನೆ ಮೂಲಕ, ಮೈಸೂರು ಕಾರ್ಖನೆ, ಮೈಸೂರು ಸಿಮೆಂಟ್‌, ಮೈಸೂರು ಸ್ಯಾಂಡಲ್‌ ಸೋಪ್‌ ಹೀಗೆ ಹತ್ತು ಹಲವು ಯೋಜನೆಗಳಿದ್ದವು. ಇದೇ ರೀತಿ ಮೋದಿಯವರು ಮೇಕ್‌ ಇನ್‌ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳಿಗೆ ಒತ್ತು ನೀಡಿ ಭಾರತೀಯರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಾಚೀನ ಭಾರತದ ಕುರುಹುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ. ಮೈಸೂರು ಪರಂಪರೆ ಉಳಿಯಬೇಕು. ಅರಮನೆಯ ಸಾಂಸ್ಕೃತಿಕ ಕುರುಹುಗಳು ಉಳಿಸಿಕೊಂಡು ಬಂದಿದ್ದೇವೆ. ಇದಕ್ಕೆ ಕೇಂದ್ರದ ಯೋಜನೆಗಳು ಪೂರಕವಾಗಿವೆ ಎಂದರು.

ಅರಮನೆಯ ರಾಜವಂಶಸ್ಥ ಪಟ್ಟ ವಹಿಸಿಕೊಂಡ ಬಳಿಕ ಮೈಸೂರು ಭಾಗದ ಜನರು ನನ್ನನ್ನು ಮನೆ ಮಗನ ರೀತಿ ನೋಡಿಕೊಂಡಿದ್ದೀರಿ. ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸುತ್ತೇನೆ. ನನಗೆ ಮತ ನೀಡಿ ಎಂದು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

5 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

9 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

9 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

10 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

10 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

11 hours ago