ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ನಾನು(ಯದುವೀರ್) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ನನಗೆ ನಿಮ್ಮ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಬಲಪಡಿಸಿ ದೇಶದ ವಿಕಸಿತ ಸಂಕಲ್ಪಕ್ಕೆ ನಿಮ್ಮ ಕೊಡುಗೆ ನೀಡಿ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳು ಹಿಂದುಳಿದವರು, ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅಂದಿನ ಮೈಸೂರು ಒಡೆಯರು ಅವರು ಬ್ರಾಂಡ್ ಮೈಸೂರು ಯೋಜನೆ ಮೂಲಕ, ಮೈಸೂರು ಕಾರ್ಖನೆ, ಮೈಸೂರು ಸಿಮೆಂಟ್, ಮೈಸೂರು ಸ್ಯಾಂಡಲ್ ಸೋಪ್ ಹೀಗೆ ಹತ್ತು ಹಲವು ಯೋಜನೆಗಳಿದ್ದವು. ಇದೇ ರೀತಿ ಮೋದಿಯವರು ಮೇಕ್ ಇನ್ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳಿಗೆ ಒತ್ತು ನೀಡಿ ಭಾರತೀಯರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪ್ರಾಚೀನ ಭಾರತದ ಕುರುಹುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ. ಮೈಸೂರು ಪರಂಪರೆ ಉಳಿಯಬೇಕು. ಅರಮನೆಯ ಸಾಂಸ್ಕೃತಿಕ ಕುರುಹುಗಳು ಉಳಿಸಿಕೊಂಡು ಬಂದಿದ್ದೇವೆ. ಇದಕ್ಕೆ ಕೇಂದ್ರದ ಯೋಜನೆಗಳು ಪೂರಕವಾಗಿವೆ ಎಂದರು.
ಅರಮನೆಯ ರಾಜವಂಶಸ್ಥ ಪಟ್ಟ ವಹಿಸಿಕೊಂಡ ಬಳಿಕ ಮೈಸೂರು ಭಾಗದ ಜನರು ನನ್ನನ್ನು ಮನೆ ಮಗನ ರೀತಿ ನೋಡಿಕೊಂಡಿದ್ದೀರಿ. ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸುತ್ತೇನೆ. ನನಗೆ ಮತ ನೀಡಿ ಎಂದು ಮನವಿ ಮಾಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…