ಮೈಸೂರು

ಮೋದಿಯೊಂದಿಗೆ ಸೇರಿ ಭಾರತ ಮಾತೆಯ ತೇರನ್ನು ಎಳೆಯೋಣ: ಯದುವೀರ್‌

ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ನಾನು(ಯದುವೀರ್) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ನನಗೆ ನಿಮ್ಮ ಮತ ನೀಡುವ ಮೂಲಕ‌ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಬಲಪಡಿಸಿ ದೇಶದ ವಿಕಸಿತ ಸಂಕಲ್ಪಕ್ಕೆ ನಿಮ್ಮ ಕೊಡುಗೆ ನೀಡಿ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳು ಹಿಂದುಳಿದವರು, ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅಂದಿನ ಮೈಸೂರು ಒಡೆಯರು ಅವರು ಬ್ರಾಂಡ್‌ ಮೈಸೂರು ಯೋಜನೆ ಮೂಲಕ, ಮೈಸೂರು ಕಾರ್ಖನೆ, ಮೈಸೂರು ಸಿಮೆಂಟ್‌, ಮೈಸೂರು ಸ್ಯಾಂಡಲ್‌ ಸೋಪ್‌ ಹೀಗೆ ಹತ್ತು ಹಲವು ಯೋಜನೆಗಳಿದ್ದವು. ಇದೇ ರೀತಿ ಮೋದಿಯವರು ಮೇಕ್‌ ಇನ್‌ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳಿಗೆ ಒತ್ತು ನೀಡಿ ಭಾರತೀಯರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಾಚೀನ ಭಾರತದ ಕುರುಹುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ. ಮೈಸೂರು ಪರಂಪರೆ ಉಳಿಯಬೇಕು. ಅರಮನೆಯ ಸಾಂಸ್ಕೃತಿಕ ಕುರುಹುಗಳು ಉಳಿಸಿಕೊಂಡು ಬಂದಿದ್ದೇವೆ. ಇದಕ್ಕೆ ಕೇಂದ್ರದ ಯೋಜನೆಗಳು ಪೂರಕವಾಗಿವೆ ಎಂದರು.

ಅರಮನೆಯ ರಾಜವಂಶಸ್ಥ ಪಟ್ಟ ವಹಿಸಿಕೊಂಡ ಬಳಿಕ ಮೈಸೂರು ಭಾಗದ ಜನರು ನನ್ನನ್ನು ಮನೆ ಮಗನ ರೀತಿ ನೋಡಿಕೊಂಡಿದ್ದೀರಿ. ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸುತ್ತೇನೆ. ನನಗೆ ಮತ ನೀಡಿ ಎಂದು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

2 mins ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

20 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

29 mins ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

9 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

12 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

13 hours ago