vidyasiri scholarship details siddaramaiah
ಮೈಸೂರು: ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ. ಯುದ್ದದ ಬದಲು ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.
ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.
ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ:
ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದು ಹೋಯಿತು ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…