ಮೈಸೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರವು ವಿರೋಧ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ವಕೀಲರ ಪರಿಷತ್ ಆಯೋಜಿಸಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಜಿಸಲು ಶನಿವಾರ ಮೈಸೂರಿಗೆ ಆಗಮಿಸಿದ ಸಿಎಂ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇರಳದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸರ್ಕಾರವು ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಐಪಿಸಿ ಸೆಕ್ಷನ್ ಗಳ ಹೆಸರನ್ನು ಬದಲಾಯಿಸಿದೆ. 1861 ರಲ್ಲಿ ಜಾರಿಯಾದ ಕಾನೂನುಗಳನ್ನು ಬದಲಾಯಿಸಲು ಹೊರಟಿದೆ. ಏನು ಮಾಡಲಿದ್ದಾರೆ ಕಾದು ನೋಡೋಣ ಇವರು ಬದಲಾಯಿಸುವ ಮೊದಲು ತಿದ್ದುಪಡಿ ಮಾಡಬೇಕಿತ್ತು ಎಂದು ಹೇಳಿದರು.
ಕಾವೇರಿ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಿ ಎಂದಿದೆ. ಆದರೆ ರಾಜ್ಯದಲ್ಲಿ ಅಧಿಕ ಮಳೆ ಆಗದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 40% ಕಮಿಷನ್ ಪಡೆದಿದೆ ಎಂದು ಜನ ಆ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ತನಿಖೆ ಮಾಡಿಸಯವುದಾಗಿ ಹೇಳಿದ್ದೆವು. ಹಾಗಾಗಿ ಗುತ್ತಿಗೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಎಸ್.ಐ.ಟಿ. ತನಿಖೆಗೆ ವಹಿಸಿದ್ದೇವೆ. ವರದಿ ಬಂದ ನಂತರ ಪ್ರಮಾಣಿಕವಾಗಿ ಕೆಲಸ ಮಾಡಿತುವ ಗುತ್ತಿಗೆದಾರರ ಹಣ ಬಿಡುಗಡೆ ಮಾಡುತ್ತೇವೆ. ಭ್ರಷ್ಟಾಚಾರ ಮಾಡಿದ್ದರೆ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…