ಮೈಸೂರು

ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರವು ವಿರೋಧ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ವಕೀಲರ ಪರಿಷತ್ ಆಯೋಜಿಸಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಜಿಸಲು ಶನಿವಾರ ಮೈಸೂರಿಗೆ ಆಗಮಿಸಿದ ಸಿಎಂ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇರಳದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸರ್ಕಾರವು ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಐಪಿಸಿ ಸೆಕ್ಷನ್ ಗಳ ಹೆಸರನ್ನು ಬದಲಾಯಿಸಿದೆ. 1861 ರಲ್ಲಿ ಜಾರಿಯಾದ ಕಾನೂನುಗಳನ್ನು ಬದಲಾಯಿಸಲು ಹೊರಟಿದೆ. ಏನು ಮಾಡಲಿದ್ದಾರೆ ಕಾದು ನೋಡೋಣ ಇವರು ಬದಲಾಯಿಸುವ ಮೊದಲು ತಿದ್ದುಪಡಿ ಮಾಡಬೇಕಿತ್ತು ಎಂದು ಹೇಳಿದರು.

ಕಾವೇರಿ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಿ ಎಂದಿದೆ. ಆದರೆ ರಾಜ್ಯದಲ್ಲಿ ಅಧಿಕ ಮಳೆ ಆಗದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 40% ಕಮಿಷನ್ ಪಡೆದಿದೆ ಎಂದು ಜನ ಆ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ತನಿಖೆ ಮಾಡಿಸಯವುದಾಗಿ ಹೇಳಿದ್ದೆವು. ಹಾಗಾಗಿ ಗುತ್ತಿಗೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಎಸ್.ಐ.ಟಿ. ತನಿಖೆಗೆ ವಹಿಸಿದ್ದೇವೆ. ವರದಿ ಬಂದ ನಂತರ ಪ್ರಮಾಣಿಕವಾಗಿ ಕೆಲಸ ಮಾಡಿತುವ ಗುತ್ತಿಗೆದಾರರ ಹಣ ಬಿಡುಗಡೆ ಮಾಡುತ್ತೇವೆ. ಭ್ರಷ್ಟಾಚಾರ ಮಾಡಿದ್ದರೆ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದರು.

lokesh

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

9 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

10 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

10 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

16 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

16 hours ago