ಮೈಸೂರು: ನಾಳೆ (ಏ.26) ನಡೆಯಲಿರುವ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣಾ ಮೊದಲ ಹಂತದ ಮತದಾನವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ಸಿದ್ಧವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದರು.
ನಗರದಲ್ಲಿಂದು ಮಾತನಾಡಿರುವ ಅವರು, ಅಧಿಕಾರಿಗಳಿಗೆ ಅಂತಿಮ ಹಂತದ ತಾಂತ್ರಿಕ ತರಭೇತಿ ನೀಡುತ್ತಿದ್ದೇವೆ. ಎಲ್ಲರು ಮಸ್ಟರಿಂಗ್ ಮುಗಿಸಿ ಮತಗಟ್ಟೆಗಳ ಬಳಿ ತಲುಪಲಿದ್ದಾರೆ. ಇದರ ನಡವೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದರು.
ಸಣ್ಣಪುಟ್ಟ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣಾ ಬಹಿಷ್ಕಾರಕ್ಕೆ ಕೆಲವರು ಮುಂದಾಗಿದ್ದಾರೆ. ಅಂತವರನ್ನು ಸ್ಥಳೀಯ ಪಿಡಿಒಗಳ ಮೂಲಕ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ. ನಿಮ್ಮದು ಯಾವುದೇ ಸಮಸ್ಯೆಗಳಿದ್ದರೂ ತಪ್ಪದೇ ಬಂದು ಮತದಾನ ಮಾಡಿ ಎಂದು ಮನವಿ ಮಾಡಿದರು.
ಇನ್ನು ಚುನಾವಣಾ ಸಿಬ್ಬಂದಿಗಳಿಗೆ ಪೋಸ್ಟಲ್ ಓಟ್ ನೀಡದಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಬಾರಿ ಚುನಾವಣೆಯಲ್ಲಿ ಪೋಸ್ಟಲ್ ವೋಟ್ನ ಪೋಸ್ಟ್ ಮಾಡುವಂತಿಲ್ಲ ಎಂದು ತಿಳಿಸಿದರು.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…