ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪಿಂಜರ್ ಫೋಲ್ನಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ಯದುವೀರ್ ಅವರ ತುಲಾಭಾರ ಮಾಡುವ ಮೂಲಕ ವಿಶಿಷ್ಟವಾಗಿ ಜನ್ಮದಿನವನ್ನು ಆಚರಿಸಲಾಯಿತು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಭಾಗಗಳಲ್ಲಿಯೂ ಪ್ರಚಾರದ ವೇಳೆ ಉತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು. ಬಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಅವರ ಭಾಗಕ್ಕೆ ಇನ್ನು ಹೋಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ಜಾತಿ ರಾಜಕಾರಣ ಅಸ್ತ್ರದ ಮೂಲಕ ಮತಯಾಚಿಸುತ್ತಿದ್ದಾರೆ ಎಂಬ ಪ್ರಶ್ನೆಗೆ, ನಾವು ಇಡೀ ಸಮಾಜವನ್ನು ಒಂದಾಗಿ ನೋಡುತ್ತಿದ್ದೇವೆ. ಇಡೀ ಸಮಾಜಕ್ಕಾಗಿ ಒಗ್ಗಟ್ಟಾಗಿ ನಿಂತು ಕೆಲಸ ಮಾಡುವುದರ ಮೇಲೆ ನಂಬಿಕೆಯಿಟ್ಟಿದ್ದೇವೆ. ನಾವು ಭಾರತಕ್ಕಾಗಿ ದುಡಿಯುತ್ತಿದ್ದೇವೆ ಎನ್ನುವ ದೃಷ್ಠಕೋನದಲ್ಲಿ ಕೆಲಸ ಮಾಡುತ್ತೇವೆ ಎಂದು ಯದುವೀರ್ ಪ್ರತಿಕ್ರಿಯೆ ನೀಡಿದರು.
ತುಲಾಭಾರ ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…